ಜಾಗತಿಕ ಹಸಿವು ಸೂಚ್ಯಂಕದಲ್ಲಿ 127 ದೇಶಗಳ ಪೈಕಿ ಭಾರತಕ್ಕೆ ಆತಂಕಕಾರಿ ಸ್ಥಾನ

Published : Oct 13, 2024, 07:44 AM IST
 ಜಾಗತಿಕ ಹಸಿವು ಸೂಚ್ಯಂಕದಲ್ಲಿ 127 ದೇಶಗಳ ಪೈಕಿ ಭಾರತಕ್ಕೆ ಆತಂಕಕಾರಿ ಸ್ಥಾನ

ಸಾರಾಂಶ

ಜಾಗತಿಕ ಹಸಿವು ಸೂಚ್ಯಂಕದಲ್ಲಿ 127 ದೇಶಗಳ ಪೈಕಿ ಭಾರತದ ಆತಂಕಕಾರಿ ಸ್ಥಾನದಲ್ಲಿದೆ. ದೇಶದಲ್ಲಿ ಶೇ.14ರಷ್ಟು ಜನರು ಅಪೌಷ್ಟಿಕತೆ ಹೊಂದಿದ್ದಾರೆ ಮತ್ತು ಶಿಶು ಮರಣ ಪ್ರಮಾಣ ಗಂಭೀರವಾಗಿದೆ.

ಲಂಡನ್‌: ಜಾಗತಿಕ ಹಸಿವಿನ ಪ್ರಮಾಣ ಅಳೆಯಲು ಬಳಸುವ ಅಪೌಷ್ಟಿಕತೆ ಮತ್ತು ಶಿಶುಗಳ ಸಾವಿನ ಅಂಕಿ ಅಂಶಗಳು ಭಾರತದಲ್ಲಿ ಗಂಭೀರ ಪರಿಸ್ಥಿತಿಯನ್ನು ಮುಂದಿಟ್ಟಿವೆ. ಇದರ ಸೂಚ್ಯಂಕದಲ್ಲಿ 127 ದೇಶಗಳ ಪೈಕಿ ಭಾರತ 105ನೇ ಸ್ಥಾನದಲ್ಲಿದೆ ಎಂದು ವರದಿಯೊಂದು ಎಚ್ಚರಿಸಿದೆ.

ಐರ್ಲೆಂಡ್‌ ಮೂಲದ ‘ಕನ್ಸರ್ನ್‌ ವಲ್ಡ್‌ವೈಡ್‌’ ಮತ್ತು ಜರ್ಮನ್‌ ಮೂಲದ ‘ವೆಲ್ತ್‌ಹಂಗರ್‌ಲೈಫ್‌’ ಬಿಡುಗಡೆ ಮಾಡಿರುವ 2024ನೇ ಸಾಲಿನ ವರದಿ ಈ ಅಂಕಿ ಅಂಶಗಳನ್ನು ಮುಂದಿಟ್ಟಿದೆ.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ ಸೇರಿದಂತೆ 42 ದೇಶಗಳು 27.3 ಅಂಕಗಳೊಂದಿಗೆ ಗಂಭೀರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ವಿಶೇಷವೆಂದರೆ ನೇಪಾಳ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ ದೇಶಗಳು ಭಾರತಕ್ಕಿಂತ ಉತ್ತಮವಾದ ‘ಮಧ್ಯಮ’ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ ಎಂದು ವರದಿ ಹೇಳಿದೆ.

ದೀಪಾವಳಿಗೆ 1.85 ಕೋಟಿ ಜನರಿಗೆ ಉಚಿತವಾಗಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್

ದೇಶದಲ್ಲಿ ಶೇ.14 ಅಪೌಷ್ಟಿಕತೆ:

ಭಾರತದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.13.7ರಷ್ಟು ಜನರು ಅಪೌಷ್ಟಿಕತೆ ಹೊಂದಿದ್ದಾರೆ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪೈಕಿ ಶೇ.35.5ರಷ್ಟು ಮಕ್ಕಳು ಬೆಳವಣಿಗೆ ಕುಂಠಿತದ ಸಮಸ್ಯೆ ಹೊಂದಿದ್ದಾರೆ. ಶೇ.18.7ರಷ್ಟು ಮಕ್ಕಳು ದುರ್ಬಲರಾಗಿದ್ದಾರೆ, ಶೇ.2.9ರಷ್ಟು ಮಕ್ಕಳು ತಮ್ಮ 5ನೇ ಹುಟ್ಟುಹಬ್ಬಕ್ಕಿಂತ ಮೊದಲೇ ಸಾವನ್ನಪ್ಪುತ್ತಿದ್ದಾರೆ ಎಂದು ವರದಿ ಹೇಳಿದೆ.

ಇದೇ ವೇಳೆ ವಿಶ್ವದಲ್ಲಿ 73.3 ಕೋಟಿ ಜನರು ಅಗತ್ಯ ಪ್ರಮಾಣದ ಆಹಾರ ಲಭ್ಯವಾಗದೇ ನಿತ್ಯವೂ ಹಸಿವಿನ ಸಮಸ್ಯೆ ಎದುರಿಸುತ್ತಿದ್ದಾರೆ, 280 ಕೋಟಿ ಜನರು ಆರೋಗ್ಯಪೂರ್ಣವಾದ ಆಹಾರದಿಂದ ವಂಚಿತರಾಗುತ್ತಿದ್ದಾರೆ ಎಂದು ವರದಿ ಹೇಳಿದೆ.

ಪೊದೆಯಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಮಗು ರಕ್ಷಿಸಿ ದತ್ತು ಪಡೆದ ಪೊಲೀಸ್ ಅಧಿಕಾರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!