ದೇಶದಲ್ಲಿ ಒಂದೇ ದಿನ 40,953 ಕೇಸ್‌: 111 ದಿನದ ಗರಿಷ್ಠ!

Published : Mar 21, 2021, 08:20 AM IST
ದೇಶದಲ್ಲಿ ಒಂದೇ ದಿನ 40,953 ಕೇಸ್‌: 111 ದಿನದ ಗರಿಷ್ಠ!

ಸಾರಾಂಶ

ನಿನ್ನೆ 40,953 ಕೇಸ್‌: 111 ದಿನದ ಗರಿಷ್ಠ| ಸಕ್ರಿಯ ಪ್ರಕರಣಗಳ ಸಂಖ್ಯೆ 2.88 ಲಕ್ಷಕ್ಕೆ ಏರಿಕೆ| 8 ರಾಜ್ಯಗಳಲ್ಲಿ ಸೋಂಕು ಹೆಚ್ಚಳ| 3 ರಾಜ್ಯದಲ್ಲಿ 76% ಸಕ್ರಿಯ ಕೇಸ್‌| ಕಳೆದ 3 ದಿನದಲ್ಲಿ ಲಕ್ಷ ಪ್ರಕರಣ ದೃಢ

ನವದೆಹಲಿ(ಮಾ.21): ದೇಶದಲ್ಲಿ ಮತ್ತೊಮ್ಮೆ ಕೊರೋನಾ ಆರ್ಭಟ ಆರಂಭವಾಗಿದ್ದು, ಶನಿವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 40,953 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಈ ವರ್ಷದ ಈವರೆಗಿನ ಮತ್ತು ಕಳೆದ ವರ್ಷದ 111 ದಿನಗಳ ಗರಿಷ್ಠ ಸಂಖ್ಯೆಯಾಗಿದೆ.

ಕಳೆದ ವರ್ಷ ನವೆಂಬರ್‌ 29ರಂದು ದೇಶದಲ್ಲಿ 41,810 ಕೇಸುಗಳು ದೃಢವಾಗಿದ್ದವು. ಅದಾದ ನಂತರದ ಅತಿ ಹೆಚ್ಚಿನ ಪ್ರಕರಣಗಳು ಶನಿವಾರ ದೃಢಪಟ್ಟಿವೆ.

ಇದೇ ವೇಳೆ ದೆಹಲಿ, ಮಹಾರಾಷ್ಟ್ರ, ಪಂಜಾಬ್‌, ಕರ್ನಾಟಕ, ಗುಜರಾತ್‌, ತಮಿಳುನಾಡು, ಮಧ್ಯಪ್ರದೇಶ, ಹರಾರ‍ಯಣಗಳಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ (62%), ಕೇರಳ (8.8%), ಪಂಜಾಬ್‌ (5.3%)ನಲ್ಲಿ ಶೇ.76.22ರಷ್ಟುಕೇಸುಗಳು ಇವೆ. ಈ ನಡುವೆ ಕೇರಳದಲ್ಲಿ ಸೋಂಕು ಪ್ರಮಾಣ ತಗ್ಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಸಕ್ರಿಯ ಕೇಸು 2.88 ಲಕ್ಷಕ್ಕೆ:

ದೇಶದಲ್ಲಿ ಕಳೆದ 10 ದಿನಗಳಿಂದ ಸೋಂಕು ಪ್ರಮಾಣ ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಫೆಬ್ರವರಿ 15ರಂದು ಕೇವಲ 1.35 ಲಕ್ಷಕ್ಕೆ ಇಳಿದಿದ್ದ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಈಗ 2.88 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಕೆಯಾಗುವವರ ಪ್ರಮಾಣ ಶೇ.96.12ಕ್ಕೆ ಕುಸಿದಿದೆ. ಇನ್ನೂ ಆತಂಕಕಾರಿ ವಿಷಯ ಎಂದರೆ ಭಾರತದಲ್ಲಿ ಕಳೆದ 3 ದಿನದಲ್ಲಿ 1 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ. ಶುಕ್ರವಾರ 39,726, ಗುರುವಾರ 35,871 ಕೇಸುಗಳು ದೃಢವಾಗಿವೆ.

ಇದೇ ವೇಳೆ ಶನಿವಾರ ಬೆಳಗ್ಗೆ 8 ಗಂಟೆಯವರೆಗಿನ 24 ತಾಸಿನ ಅವಧಿಯಲ್ಲಿ 188 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಪೈಕಿ ಮಹಾರಾಷ್ಟ್ರದಲ್ಲಿ 70 ಮಂದಿ, ಪಂಜಾಬ್‌ 38 ಹಾಗೂ ಕೇರಳದಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಭಾರತದಲ್ಲಿ ಈವರೆಗೆ 1,15,55,284 ಜನರಿಗೆ ಕೊರೋನಾ ಸೊಂಕು ತಗುಲಿದೆ. ಇವರಲ್ಲಿ 1,11,07,332 ಜನರು ಗುಣಮುಖರಾಗಿದ್ದಾರೆ. 1,59,558 ಜನರು ಬಲಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?