114 ದಿನದ ಬಳಿಕ ಭಾರತದಲ್ಲಿ 500ರ ಗಡಿ ದಾಟಿದ ಕೋವಿಡ್ ಪ್ರಕರಣ, ಮತ್ತೆ ಅಲರ್ಟ್!

Published : Mar 13, 2023, 04:53 PM ISTUpdated : Mar 13, 2023, 04:58 PM IST
114 ದಿನದ ಬಳಿಕ ಭಾರತದಲ್ಲಿ 500ರ ಗಡಿ ದಾಟಿದ ಕೋವಿಡ್ ಪ್ರಕರಣ, ಮತ್ತೆ ಅಲರ್ಟ್!

ಸಾರಾಂಶ

2020ರಲ್ಲಿ ಭಾರತದಲ್ಲಿ ಕೊರೋನಾ ಪ್ರಕರಣ ಕಾಣಿಸಿಕೊಂಡ ಬೆನ್ನಲ್ಲೇ ಭಾರತ ಲಾಕ್‌ಡೌನ್ ಸೇರಿದಂತೆ ಹಲವು ಕಠಿಣ ನಿರ್ಬಂಧ ವಿಧಿಸಿತು. ಲಸಿಕೆ ವಿತರಣೆ ಆರಂಭಗೊಂಡ ಬಳಿಕ ಭಾರತ ಕೋವಿಡ್ ಪ್ರಕರಣದಲ್ಲಿ ಸಂಪೂರ್ಣ ನಿಯಂತ್ರ ಸಾಧಿಸಿತ್ತು. ಇದೀಗ ಮತ್ತೆ ಭಾರತದಲ್ಲಿ ಕೋವಿಡ್ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.  

ನವದೆಹಲಿ(ಮಾ.13): ಭಾರತ ಕೋವಿಡ್ ವೈರಸ್‌ ವಿರುದ್ಧ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಅತ್ಯುತ್ತಮ ಕೋವಿಡ್ ಲಸಿಕೆ ಮೂಲಕ ವೈರಸ್‌ನಿಂದ ಮುಕ್ತವಾಗಿದೆ. ಆದರೆ ಕಳೆದೆರಡು ತಿಂಗಳಿನಿಂದ ಭಾರತದಲ್ಲಿ ಜ್ವರ, ಶೀತ ಕೆಮ್ಮು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇನ್ಲುಫ್ಲುಯೆಂಜಾ ಹರಡುವಿಕೆಯಿಂದ ಭಾರತದಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 524 ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ನಿಧಾನವಾಗಿ ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಇನ್ಲುಫ್ಲುಯೆಂಜಾ ಜೊತೆ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿರುವುದು ಇದೀಗ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಾರ್ಚ್ 12 ರಂದು ಭಾರತದಲ್ಲಿ 524 ಕೋವಿಡ್ ಪ್ರಕರಣ ದಾಖಲಾಗಿದೆ. ಈ  ಮೂಲಕ ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ 3,809 ಕ್ಕೆ ಏರಿಕೆಯಾಗಿದೆ. ಇತರ ದೇಶಗಳಿಗ ಹೋಲಿಸಿದರೆ ಹಾಗೂ ಭಾರತದಲ್ಲಿ ಈ ಹಿಂದೆ ದಾಖಲಾದ ಕೋವಿಡ್ ಸಂಖ್ಯೆ, ಪ್ರಮಾಣಕ್ಕೆ ಹೋಲಿಸಿದರೆ ಇದೀಗ ಅತೀ ಕಡಿಮೆ ಪ್ರಕರಣ ವರದಿಯಾಗಿದೆ. ಆದರೆ ಪ್ರತಿ ದಿನ ಇದೀಗ 500 ಪ್ರಕರಣಗಳು ದಾಖಲಾಗುತ್ತಿರುವುದು ಆತಂಕ ಹೆಚ್ಚಿಸಿಸಿದೆ. 114 ದಿನಗಳ ಬಳಿಕ ಭಾರತದಲ್ಲಿ 500ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.

ಎಚ್‌3ಎನ್‌2 ಕೂಡ ಕೋವಿಡ್‌ ರೀತಿಯಲ್ಲೇ ಹಬ್ಬುತ್ತೆ: ತಜ್ಞರ ಎಚ್ಚರಿಕೆ

ಕೋವಿಡ್‌ಗೆ ಬಲಿಯಾದವರ ಸಂಖ್ಯೆ ನಿಯಂತ್ರಣದಲ್ಲಿದೆ. ಕಳೆದ ಒಂದು ವಾರದಲ್ಲಿ 6 ಮಂದಿ ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಇದುವರೆಗೆ ಕೊರೋನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 5,30,782. ಭಾರತದಲ್ಲಿ ಇದುವರೆಗೆ ದಾಖಲಾದ ಕೋವಿಡ್ ಪ್ರಕರಣ ಸಂಖ್ಯೆ 4.46 ಕೋಟಿ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ 0.01 . ಇನ್ನು ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವವ ಸಂಖ್ಯೆ ಶೇಕಡಾ 98.80. 

ಬೆಂಗಳೂರಿನಲ್ಲಿ ಮಾರ್ಚ್ 12 ರಂದು  39 ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮೂಲಕ ಪಾಸಿಟಿವಿಟಿ ದರ ಶೇ.7.70 ದಾಖಲಾಗಿದೆ. ಸೋಂಕಿನಿಂದ 22 ಜನ ಗುಣಮುಖರಾಗಿದ್ದಾರೆ. ಕೋವಿಡ್ ಮರಣ ದಾಖಲಾಗಿಲ್ಲ. ಬೆಂಗಳೂರಿನಲ್ಲಿ 335 ಸಕ್ರಿಯ ಸೋಂಕು ಪ್ರಕರಣಗಳಿದ್ದು, 42 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 73 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 10 ಮಂದಿ ಮೊದಲ ಡೋಸ್‌, 16 ಮಂದಿ ಎರಡನೇ ಡೋಸ್‌ ಮತ್ತು 47 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 601 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಕೋವಿಡ್‌ ನಂತರ ಹೃದಯಸ್ತಂಭನದಿಂದ ದೇಶದಲ್ಲಿ ಸಾವು 15% ಹೆಚ್ಚಳ: ವೈದ್ಯರು

ಶನಿವಾರ(ಮಾ.11) ಬೆಂಗಳೂರಲ್ಲಿ 57 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಭಾನುವಾರ ಈ ಸಂಖ್ಯೆ 39ಕ್ಕೆ ಇಳಿಕೆಯಾಗಿದೆ. ಭಾನುವಾರ ಕೋವಿಡ್ ಟೆಸ್ಟಿಂಗ್ ಸಂಖ್ಯೆ ಇಳಿಕೆಯಾಗಿರುವ ಕಾರಣ ಪ್ರಕರಣಗದಲ್ಲಿ ಇಳಿಕೆಯಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ.  ಮಹಾರಾಷ್ಟ್ರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ