ದೇಶದಲ್ಲಿ ಸೋಂಕು ತೀವ್ರವಾಗಿ ಇಳಿಕೆ!

Published : May 18, 2021, 08:00 AM ISTUpdated : May 18, 2021, 11:31 AM IST
ದೇಶದಲ್ಲಿ ಸೋಂಕು ತೀವ್ರವಾಗಿ ಇಳಿಕೆ!

ಸಾರಾಂಶ

* ದೇಶದಲ್ಲಿ ಸೋಂಕು ತೀವ್ರವಾಗಿ ಇಳಿಕೆ * 2.8 ಲಕ್ಷ ಹೊಸ ಕೇಸು ಮಾತ್ರ * ಸೋಂಕು 27 ದಿನಗಳ ಕನಿಷ್ಠ

ನವದೆಹಲಿ(ಮೇ.18): ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,81,386 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 27 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ. ಹಲವು ದಿನಗಳಿಂದ 4 ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, 2ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಆದರೆ ಹೊಸ ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ಇನ್ನೂ ದೊಡ್ಡ ಮಟ್ಟದಲ್ಲೇ ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4106 ಜನರು ವೈರಸ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 274,390ಕ್ಕೆ ತಲುಪಿದೆ. ಇದೇ ವೇಳೆ ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.76ರಷ್ಟುಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿದೆ.

"

ಶೇ.20ಕ್ಕಿಂತ ಹೆಚ್ಚು ಪಾಸಿಟಿವಿಟಿ ಕರ್ನಾಟಕ ನಂ.1: ರಾಜ್ಯದ 27 ಜಿಲ್ಲೆಗಳಲ್ಲಿ ಅತಿ ಹೆಚ್ಚು ಪಾಸಿಟಿವಿಟಿ

ಕರ್ನಾಟಕದಲ್ಲಿ 27 ಜಿಲ್ಲೆಗಳು ಶೇ.20ಕ್ಕಿಂತ ಹೆಚ್ಚು ಪಾಸಿಟಿವಿಟಿ ಹೊಂದಿವೆ. ಈ ಮೂಲಕ ಹೆಚ್ಚು ಪಾಸಿಟಿವಿಟಿ ಪ್ರಮಾಣದ ಜಿಲ್ಲೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2.49 ಕೋಟಿ ಒಟ್ಟು ಸೋಂಕಿತರು

2.74 ಲಕ್ಷ ಒಟ್ಟು ಸಾವಿನ ಸಂಖ್ಯೆ

2.11 ಲಕ್ಷ ನಿನ್ನೆ ಚೇತರಿಸಿಕೊಂಡವರು

35 ಲಕ್ಷ ಸಕ್ರಿಯ ಸೋಂಕಿತರು

ಶೇ.84.81 ಚೇತರಿಕೆ ಪ್ರಮಾಣ

ಶೇ.1.10 ಶೇಕಡವಾರು ಸಾವಿನ ಪ್ರಮಾಣ

31 ಕೋಟಿ ಈವರೆಗೆ ನಡೆದ ಕೋವಿಡ್‌ ಪರೀಕ್ಷೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ