
ಚೆನ್ನೈ: ಭಾರತದ ಮಹತ್ವಾಕಾಂಕ್ಷಿ ಸಮುದ್ರಯಾನ ಮಿಷನ್ ಭಾಗವಾಗಿ, ಸಂಪೂರ್ಣ ಸ್ವದೇಶಿ ನಿರ್ಮಿತ 28 ಟನ್ ತೂಕದ ‘ಮತ್ಸ್ಯ-6000’ ಮಾನವಸಹಿತ ಕಡಲಾಳದ ನೌಕೆಯನ್ನು ಆಳಸಮುದ್ರಕ್ಕೆ ಕಳಿಸಲು ಭಾರತ ಸಜ್ಜಾಗಿದೆ. ಇದೇ ಮೊದಲ ಬಾರಿ 6,000 ಮೀ. ಆಳಕ್ಕೆ ಇಬ್ಬರು ಭಾರತೀಯ ಸಮುದ್ರಯಾನಿಗಳು ಸಮುದ್ರಕ್ಕೆ ಇಳಿಯಲಿದ್ದಾರೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
‘ಮತ್ಸ್ಯ-6000’ ಅನ್ನು 2026ರ ಆರಂಭದಲ್ಲಿ ಚೆನ್ನೈ ಕಡಲತೀರದಿಂದ 500 ಮೀ. ಆಳಕ್ಕೆ ಇಳಿಸಲಾಗುತ್ತದೆ. ನಂತರ 2027ರಲ್ಲಿ 6,000 ಮೀ. ಆಳಕ್ಕೆ ಕಳಿಸಲಾಗುತ್ತದೆ. ಚೆನ್ನೈ ಎನ್ಐಒಟಿ ವಿಜ್ಞಾನಿಗಳಾದ ರಮೇಶ್ ರಾಜು ಹಾಗೂ ಜತೀಂದರ್ ಪಾಲ್ ಸಿಂಗ್ ಇದರ ಸವಾರರಾಗಿ ತೆರಳಲಿದ್ದಾರೆ. ಭಾರತ 6,000 ಮೀ. ಆಳಕ್ಕೆ ಮಾನವರನ್ನು ಕಳಿಸುತ್ತಿರುವುದು ಇದೇ ಮೊದಲು.
ಇದು ವಿಶ್ವದ ಅತ್ಯಂತ ಸುರಕ್ಷಿತ ಮಾನವಸಹಿತ ನೌಕೆಗಳಲ್ಲಿ ಒಂದಾಗಿದ್ದು, ಆಳ ಸಮುದ್ರದ ಅಪರೂಪದ ಖನಿಜಗಳು, ಅನಿಲ ಸಂಗ್ರಹ, ಹೊಸ ಜೀವಿಗಳ ಅಧ್ಯಯನ ನಡೆಸಲಿದೆ. ಈ ಯೋಜನೆ ಯಶಸ್ವಿಯಾದರೆ ಭಾರತವು ಅಮೆರಿಕ, ರಷ್ಯಾ, ಚೀನಾ, ಜಪಾನ್, ಫ್ರಾನ್ಸ್ ನಂತರ 6,000 ಮೀ. ಆಳಕ್ಕೆ ಮನುಷ್ಯನನ್ನು ಕಳುಹಿಸಬಲ್ಲ 6ನೇ ದೇಶವಾಗಲಿದೆ. ಇದು ಭಾರತದ ಸಮುದ್ರ ಆರ್ಥಿಕತೆಗೆ (ಬ್ಲೂ ಇಕಾನಮಿ) ದೊಡ್ಡ ಶಕ್ತಿಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ