ಜು.31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿದ ಭಾರತ!

Published : Jul 03, 2020, 06:32 PM IST
ಜು.31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿದ ಭಾರತ!

ಸಾರಾಂಶ

ಅನ್‌ಲಾಕ್ ಆರಂಭವಾದ ಬಳಿಕ ಭಾರತದಲ್ಲಿ ಕೊರೋನಾ ವೈರಸ್ ಮೀತಿ ಮೀರುತ್ತಿದೆ. ನಿಯಂತ್ರಣದಲ್ಲಿದ್ದ ರಾಜ್ಯಗಳಲ್ಲೇ ಇದೀಗ ವೈರಸ್ ಅತಿಯಾಗಿದೆ. ಹೀಗಾಗಿ ಜುಲೈ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಭಾರತ ರದ್ದು ಮಾಡಿದೆ. 

ನವದೆಹಲಿ(ಜು.03): ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇದೀಗ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಜುಲೈ 31ರ ವರೆಗೆ ರದ್ದು ಮಾಡಿದೆ. ಕೊರೋನಾ ವೈರಸ್ ಕಾರಣ ಮಾರ್ಚ್ ಅಂತಿಮ ವಾರದಲ್ಲಿ ಎಲ್ಲಾ ವಿಮಾನ ಸೇವೆಗಳನ್ನು ರದ್ದು ಮಾಡಲಾಗಿದೆ. ಲಾಕ್‌ಡೌನ್ ಆರಂಭವಾಗುತ್ತಿದ್ದಂತೆ ವಿಮಾನ ಸೇವೆ ಸೇರಿದಂತೆ ಬಹುತೇಕ ಎಲ್ಲಾ ಸೇವೇಗಳು ರದ್ದಾಗಿತ್ತು. ಇದೀಗ ಅಂತಾರಾಷ್ಟ್ರೀ ವಿಮಾನ ಹಾರಾಟದ ಮೇಲಿನ ತಾತ್ಕಾಲಿಕ ಸ್ಥಗಿತವನ್ನು ಮುಂದುವರಿಸಿದೆ.

ಜು.4ರಂದು ಕುವೈಟ್‌ ಕನ್ನ​ಡಿ​ಗ​ರಿಗೆ ಮಂಗಳೂರಿಗೆ ಚಾರ್ಟರ್ಡ್ ವಿಮಾನ..

ಅನ್‌ಲಾಕ್ ಆರಂಭವಾಗುತ್ತಿದ್ದಂತೆ ದೇಸಿ ವಿಮಾನ ಹಾರಾಟ ಆರಂಭಗೊಂಡಿದೆ. ಕೆಲ ಮಾರ್ಗಗಳಲ್ಲಿ ನಿಯಮಿತ ದೇಸಿ ವಿಮಾನ ಹಾರಾಟ ಆರಂಭಗೊಂಡಿದೆ. ಆದರೆ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಹೊಸ ನಾಗರಿಕ ವಿಮಾನಯಾನ ಸಚಿವಾಲಯ ಜುಲೈ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಿದೆ.

23ರಂದು ದುಬೈನಲ್ಲಿ ಸಿಲುಕಿದ 200 ಮಂದಿ ಕನ್ನಡಿಗರು ತವರಿಗೆ..!...

ವಂದೇ ಭಾರತ ಮಿಶನ್ ಅಡಿಯಲ್ಲಿ ಕೆಲ ಅಂತಾರಾಷ್ಟ್ರೀ ವಿಮಾನ ಹಾರಟ ಸೇವೆ ಲಭ್ಯವಿದೆ. ಕೆಲ ಮಾರ್ಗಗಳಲ್ಲಿ ನಿಯಮಿತ ವಿಮಾನ ಸೇವೆ ಲಭ್ಯವಾಗಲಿದೆ. ಇದನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆ ಲಭ್ಯವಿರುವುದಿಲ್ಲ. ಜುಲೈ 31ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!