ಕೊರೋನಾ ಬಗ್ಗೆ ಆತಂಕ ಬೇಡ, ಭಾರತದಲ್ಲಿ ಗುಣಮುಖರ ಸಂಖ್ಯೆ ಹೆಚ್ಚು ಎಂದ ಆರೋಗ್ಯ ಇಲಾಖೆ!

Suvarna News   | Asianet News
Published : Jun 02, 2020, 07:49 PM IST
ಕೊರೋನಾ ಬಗ್ಗೆ ಆತಂಕ ಬೇಡ, ಭಾರತದಲ್ಲಿ ಗುಣಮುಖರ ಸಂಖ್ಯೆ ಹೆಚ್ಚು ಎಂದ ಆರೋಗ್ಯ ಇಲಾಖೆ!

ಸಾರಾಂಶ

ಕೊರೋನಾ ವೈರಸ್ ಭಾರತದಲ್ಲಿ ತೀವ್ರವಾಗಿ ಹರಡುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಜನರಿಗೆ ಆಭಯ ನೀಡಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೊರೋನಾ ಸೋಂಕಿತರ ಗುಣಮುಖ ಸಂಖ್ಯೆ ಶೇಕಡಾ 48.07 ಎಂದು ಆರೋಗ್ಯ ಇಲಾಖೆ ಹೇಳಿದೆ.

ನವದೆಹಲಿ(ಜೂ.02): ಕೊರೋನಾ ವೈರಸ್ ತಡೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರೂ ಕೂಡ ಎಚ್ಚರವಹಿಸಬೇಕಿದೆ. ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಭಾರತದಲ್ಲಿ ಕೊರೋನಾ ಉಚ್ರಾಯ ಸ್ಥಿತಿ ತಲುಪಿಲ್ಲ. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ನಿಯಂತ್ರಣದಲ್ಲಿದೆ. ಇತ್ತ ಗುಣಮುಖರ ಸಂಖ್ಯೆ ಕೂಡ ಇತರೆಲ್ಲಾ ದೇಶಗಳಿಗಿಂತ ಹೆಚ್ಚಿದೆ ಎಂದಿದೆ.

ಒಂದು ತಿಂಗಳ ಹಸುಗೂಸಿನೊಂದಿಗೆ ಮುಂಬೈನಿಂದ ಆಗಮಿಸಿದ ಬಾಣಂತಿ; ಗದಗದಲ್ಲಿ ಕ್ವಾರಂಟೈನ್

ಭಾರತದಲ್ಲಿ ಕೊರೋನಾ ವೈರಸ್‌ನಿಂದ ಗುಣಮುಖರಾದವರ ಸಂಖ್ಯೆ ಶೇಕಡಾ 48.07. ಇಲ್ಲೀವರೆಗೆ 95,527 ಮಂದಿ ಕೊರೋನಾ ವೈರಸ್‌ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಹೇಳಿದ್ದಾರೆ. ಭಾರತದಲ್ಲಿ 5,598 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ.

ಡ್ಯೂಟಿ ಮುಗಿದ ಮೇಲೆ ರಿಲ್ಯಾಕ್ಸ್ ಆಗೋಕೆ ವಿಕ್ಟೋರಿಯಾ ಆಸ್ಪತ್ರೆ ವಾರಿಯರ್ಸ್ ಏನ್ಮಾಡ್ತಾರೆ ನೋಡಿ..!...

ಕೊರೋನಾ ಸೋಂಕಿತರ ಸಾವಿನ ಪ್ರಮಾಣ ಶೇಕಡಾ 2.82. ಕೊರೋನಾ ಭೀಕರತೆಗೆ ಗುರಿಯಾಗಿರುವ ರಾಷ್ಟ್ರಗಳಲ್ಲಿ ಭಾರತಕ್ಕೆ 7ನೇ ಸ್ಥಾನ. ಆದರೆ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ ದೇಶಗಳೆಲ್ಲಾ ಕಡಿಮೆ ಜನಸಂಖ್ಯೆ ಹೊಂದಿದೆ. ಈ ದೇಶಗಳ ಜೊತೆ ಭಾರತವನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಲಾಕ್‌ಡೌನ್ ಸೇರಿದಂತೆ ಹಲವು ಆದೇಶದ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದೀಗ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಶುಚಿತ್ವ ಕಾಪಾಡಿಕೊಳ್ಳುವುದು ಸೇರಿದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?