
ನವದೆಹಲಿ(ಮೇ.27): ಲಡಾಖ್ ಮತ್ತು ಸಿಕ್ಕಿಂ ಗಡಿಯಲ್ಲಿ ಚೀನಾ ಕ್ಯಾತೆ ಹೆಚ್ಚಳವಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿ, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮೂರು ಸೇನಾ ಪಡೆ(ಸಿಡಿಎಸ್)ಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದದರು. ಸಭೆಯಲ್ಲಿ ಲಡಾಖ್ ಮತ್ತು ಸಿಕ್ಕಿಂ ಗಡಿಯಲ್ಲಿನ ಪ್ರಸಕ್ತ ಸ್ಥಿತಿಗತಿ ಮತ್ತು ಯಾವುದೇ ಬಾಹ್ಯ ಸವಾಲನ್ನು ಎದುರಿಸಲು ದೇಶದ ಸನ್ನದ್ಧ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಲಾಯ್ತು ಎನ್ನಲಾಗಿದೆ.
ಇದಕ್ಕೂ ಮುನ್ನ ಸಿಡಿಎಸ್ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, 3 ಸೇನಾ ಪಡೆಗಳ ಮುಖ್ಯಸ್ಥರಾದ ಮುಕುಂದ್ ಮನೋಜ್ ನರವಣೆ, ಏರ್ಚೀಫ್ ಮಾರ್ಷಲ್ ಬೀರೆಂದರ್ ಸಿಂಗ್ ಧನುವಾ ಹಾಗೂ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಗಡಿಯಲ್ಲಿ ಭಾರತೀಯ ಸೇನೆ ಮೇಲೆ ಚೀನಾ ಯೋಧರು ನಡೆಸುತ್ತಿರುವ ಆಟಾಟೋಪಗಳ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ