
ನವದೆಹಲಿ(ಫೆ.04): ರೈತರ ಹತ್ಯಾಕಾಂಡದ ಹ್ಯಾಷ್ಟ್ಯಾಗ್ನಲ್ಲಿ ಆರಂಭಿಸಿರುವ ಖಾತೆಯೂ ಸೇರಿದಂತೆ ಹಲವು ಪ್ರಚೋದನಾಕಾರಿ ಖಾತೆಗಳನ್ನು ತನ್ನ ಸೂಚನೆಯ ಹೊರತಾಗಿಯೂ ರದ್ದುಪಡಿಸದ ಟ್ವೀಟರ್ಗೆ ಸರ್ಕಾರ ನೇರ ಎಚ್ಚರಿಕೆ ನೀಡಿದೆ. ಆದೇಶ ಪಾಲಿಸದೇ ಹೋದಲ್ಲಿ ಕಾನೂನು ಕ್ರಮ ಎದುರಿಸಬೇಕಾದೀತು ಎಂದು ಕೇಂದ್ರ ಸರ್ಕಾರ ಟ್ವೀಟರ್ಗೆ ಸೂಚಿಸಿದೆ.
ಇತ್ತೀಚಿನ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟರ್ನಲ್ಲಿ ಹಲವು ಹೊಸ ಖಾತೆಗಳನ್ನು ತೆರೆಯಲಾಗಿದೆ. ಈ ಪೈಕಿ ಕೆಲ ಖಾತೆಗಳಲ್ಲಿ ಮೋದಿ ಸರ್ಕಾರ ರೈತರ ಹತ್ಯಾಕಾಂಡಕ್ಕೆ ಸಂಚುರೂಪಿಸಿದೆ ಎಂಬೆಲ್ಲಾ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಇನ್ನು ಕೆಲವು ಖಾತೆಗಳಲ್ಲಿ ಪ್ರತಿಭಟನೆ ಕುರಿತು ಮತ್ತು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಅಂಶಗಳನ್ನು ಪ್ರಸ್ತಾಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂಥ 250ಕ್ಕೂ ಹೆಚ್ಚು ಖಾತೆಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ಇತ್ತೀಚೆಗೆ ಕೇಂದ್ರ ಸರ್ಕಾರ ಸೂಚಿಸಿತ್ತು. ಈ ಆದೇಶವನ್ನು ಟ್ವೀಟರ್ ಸಂಸ್ಥೆ ಪಾಲಿಸಿತ್ತಾದರೂ, ಕೆಲವೇ ಗಂಟೆಗಳ ಬಳಿಕ ಮತ್ತೆ ಖಾತೆಗಳನ್ನು ಚಾಲ್ತಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಸಂಸ್ಥೆಗೆ ನೋಟಿಸ್ ರವಾನಿಸಿರುವ ಸರ್ಕಾರ, ‘ಟ್ವೀಟರ್ ಮಧ್ಯವರ್ತಿಯ ರೀತಿಯಲ್ಲಿ ಕೆಲಸ ಮಾಡುವ ಸಂಸ್ಥೆ. ಸರ್ಕಾರ ಆದೇಶಗಳನ್ನು ಪಾಲಿಸುವುದು ಅದರ ಕರ್ತವ್ಯ. ಒಂದು ವೇಳೆ ಈ ಆದೇಶವನ್ನು ಪಾಲಿಸದೇ ಹೋದಲ್ಲಿ ಕಾನೂನು ಕ್ರಮ ಎದುರಿಸಬೇಕಾದೀತು’ ಎಂದು ಎಚ್ಚರಿಸಿದೆ. ಅಲ್ಲದೆ ತನ್ನ ವಾದಕ್ಕೆ ಸಮರ್ಥನೆಯಾಗಿ ಸುಪ್ರೀಂಕೋರ್ಟ್ನ ಕೆಲ ತೀರ್ಪನ್ನು ಸರ್ಕಾರ ಉದಾಹರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ