ಸರ್ಕಾ​ರದ ಅಸ​ಮ​ರ್ಥ​ತೆಗೆ ದೇಶ ಭಾರೀ ಬೆಲೆ ತೆರ​ಲಿ​ದೆ: ರಾಹು​ಲ್‌ ಕಿಡಿ!

Published : Mar 19, 2020, 04:51 PM IST
ಸರ್ಕಾ​ರದ ಅಸ​ಮ​ರ್ಥ​ತೆಗೆ ದೇಶ ಭಾರೀ ಬೆಲೆ ತೆರ​ಲಿ​ದೆ: ರಾಹು​ಲ್‌ ಕಿಡಿ!

ಸಾರಾಂಶ

ಸರ್ಕಾ​ರದ ಅಸ​ಮ​ರ್ಥ​ತೆಗೆ ದೇಶ ಭಾರೀ ಬೆಲೆ ತೆರ​ಲಿ​ದೆ: ರಾಹು​ಲ್‌| ಸೋಂಕು ತಡೆಗೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರ ಶ್ಲಾಘನೆ ಮಾಡಿದ್ದ ಚಿದಂಬರಂ ಬೆನ್ನಲ್ಲೇ ಕಾಂಗ್ರೆಸ್ ನಾಯಕನ ಕಿಡಿ

ನವ​ದೆ​ಹ​ಲಿ[ಮಾ.19]: ಕೊರೋನಾ ವೈರಸ್‌ ನಿಯಂತ್ರಣ​ಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದರೂ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾತ್ರ ಈ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಕೊರೋನಾ ನಿಗ್ರಹದ ವಿಷಯದಲ್ಲಿ ನಿರ್ಣಾ​ಯ​ಕ​ವಾಗಿ ಕಾರ್ಯ​ನಿ​ರ್ವ​ಹಿ​ಸುವ​ಲ್ಲಿ​ನ ಸರ್ಕಾ​ರದ ಅಸ​ಮ​ರ್ಥ​ತೆ​ಯಿಂದಾ​ಗಿ ದೇಶ ಭಾರೀ ಬೆಲೆ ತೆರ​ಬೇ​ಕಾ​ಗು​ತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚ​ರಿ​ಕೆ ನೀಡಿ​ದ್ದಾ​ರೆ.

ಕ್ಷಿಪ್ರ ಮತ್ತು ಆಕ್ರ​ಮ​ಣಕಾರಿ ಕ್ರಮ ಕೊರೋನಾ ವೈರ​ಸ್‌ಗೆ ಉತ್ತ​ರ​ವಾ​ಗಿದೆ. ಆದರೆ, ನಮ್ಮ ಸರ್ಕಾ​ರದ ಅಸ​ಮ​ರ್ಥ​ತೆ​ಯಿಂದಾಗಿ ಭಾರ​ತ ಭಾರೀ ದೊಡ್ಡ ಬೆಲೆ​ಯನ್ನು ತೆರ​ಬೇ​ಕಾದೀತು ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ​ದ್ದಾ​ರೆ.

ಇನ್ನು ಎರಡು ದಿನಗಳ ಹಿಂದೆಯಷ್ಟೇ ಸೋಂಕು ತಡೆಗೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರ ಶ್ಲಾಘನೀಯ ಎಂದು ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿ ಹಾಡಿ ಹೊಗಳಿದ್ದರು. ಅಲ್ಲದೇ ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದೂ ಹೇಳಿದ್ದರು. ಹೀಗಿರುವಾಗ ಕಾಂಗ್ರೆಸ್ ನಾಯಕನ ಮಾತುಗಳು ಭಾರೀ ವಿವಾದ ಸೃಷ್ಟಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!