ಎಚ್ಚರಿಕೆ ಮರೆತು ಸಹಜ ಸ್ಥಿತಿಗೆ ಮರಳಿದ ಭಾರತಕ್ಕೆ ಈ ಸ್ಥಿತಿ; ಅಮೆರಿಕ ಸಾಂಕ್ರಾಮಿಕ ರೋಗ ತಜ್ಞ!

Published : May 12, 2021, 06:27 PM ISTUpdated : May 12, 2021, 09:01 PM IST
ಎಚ್ಚರಿಕೆ ಮರೆತು ಸಹಜ ಸ್ಥಿತಿಗೆ ಮರಳಿದ ಭಾರತಕ್ಕೆ ಈ ಸ್ಥಿತಿ; ಅಮೆರಿಕ ಸಾಂಕ್ರಾಮಿಕ ರೋಗ ತಜ್ಞ!

ಸಾರಾಂಶ

ಕೊರೋನಾ ಗೆದ್ದು ಬಿಟ್ಟೆವು ಎಂಬ ತಪ್ಪು ಕಲ್ಪೆನೆಯೇ ಭಾರತದ ಈ ಸ್ಥಿತಿಗೆ ಕಾರಣ ಅಮೆರಿಕ ಉನ್ನತ ಸಾಂಕ್ರಾಮಿಕ ರೋಗ ತಜ್ಞ ಬಹಿರಂಗ ಪಡಿಸಿದ ಮಾಹಿತಿ ಎಚ್ಚರಿಕೆ ಮರೆತು ಸಹಜ ಸ್ಥಿತಿಗೆ ಮರಳಿದ ಕಾರಣ ಕೊರೋನಾ ಉಲ್ಬಣ

ನ್ಯೂಯಾರ್ಕ್(ಮೇ.12): ಕೊರೋನಾ ವೈರಸ್ 2ನೇ ಅಲೆ ಭಾರತವವನ್ನು ಬುಡ ಮೇಲು ಮಾಡಿದೆ. ಸಾಂಕ್ರಾಮಿಕ ರೋಗ ಎದುರಿಸಲು, ನಿಭಾಯಿಸಲು ಹಾಗೂ ನಿಯಂತ್ರಿಸಲು ದೇಶ ಹರಸಾಹಸ ಪಡುತ್ತಿದೆ. ಭಾರತದ ಈ ಸ್ಥಿತಿಗೆ, ಕೊರೋನಾ ಗೆದ್ದು ಬಿಟ್ಟೆವು ಎಂಬ ತಪ್ಪು ಊಹೆ, ಎಚ್ಚರಿಕೆ ಮರೆತು ಜನರು ಸಹಜ ಸ್ಥಿತಿಗೆ ಮರಳಿದ ಕಾರಣ 2ನೇ ಅಲೆ ಈ ಮಟ್ಟಿಗೆ ಭೀಕರತೆ ಸೃಷ್ಟಿಸಿದೆ ಎಂದು ಅಮೆರಿಕ ಉನ್ನತ ಸಾಂಕ್ರಾಮಿಕ ರೋಗ ತಜ್ಞ ಹಾಗೂ ಅಧ್ಯಕ್ಷ ಜೋ ಬೈಡನ್ ವೈದ್ಯಕೀಯ ಸಲಹೆಗಾರ ಡಾ. ಆ್ಯಂಥೋನಿ ಫೌಸಿ ಹೇಳಿದ್ದಾರೆ.

2ನೇ ಡೋಸ್ ವಿಳಂಬವಾದರೆ ಆತಂಕ ಬೇಡ; ತಜ್ಞರ ವರದಿಯಿಂದ ನಿಟ್ಟುಸಿರು ಬಿಟ್ಟ ಜನ!

ಕೆಲ ದೇಶಗಳಿಗೆ ಕೊರೋನಾ ಮೊದಲ ಅಲೆ ಭೀಕರವಾಗಿ ಅಪ್ಪಳಿಸಿತ್ತು. ಆದರೆ ಭಾರತಕ್ಕೆ ಹೆಚ್ಚಿನ ಅಪಾಯ ಇರಲಿಲ್ಲ. ಮೊದಲ ಅಲೆಯನ್ನು ಕಟ್ಟು ನಿಟ್ಟಿನ ನಿಯಮದಿಂದ ಭಾರತ ಯಶಸ್ವಿಯಾಗಿ ನಿಭಾಯಿಸಿತ್ತು. ಪರಿಣಾಮ ಕೊರೋನಾ ಗೆದ್ದು ಬಿಟ್ಟಿದ್ದೇವೆ ಎಂಬ ತಪ್ಪು ಕಲ್ಪನೆಯಲ್ಲಿ ಭಾರತ ಸಹಜ ಸ್ಥಿತಿಗೆ ಮರಳಿತ್ತು. ಪರಿಣಾಮ ಎರಡನೇ ಅಲೆಯನ್ನು ಎದುರಿಸಲು ಸಾಧ್ಯವಾಗದೇ ಇದೀಗ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಫೌಸಿ ಹೇಳಿದ್ದಾರೆ.

ಆಡಳಿತ ವರ್ಗ ದೇಶದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಕೆಲಸ ಮಾಡಬೇಕು. ಜನರು ಈ ಸಂಕಷ್ಟದ ಸಮಯದಲ್ಲಿ ಪರಿಸ್ಥಿತಿಗೆ ತಕ್ಕಂತೆ ವರ್ತಿಸಬೇಕು. ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಕೊರೋನಾ ಮಾರ್ಗಸೂಚಿಗಳ ಕಟ್ಟು ನಿಟ್ಟಿನ ಪಾಲನೆ, ಕೊರೋನಾ ಲಸಿಕೆ ಪಡೆಯುವಿಕೆ ಸೇರಿದಂತೆ ಹಲವು ಕ್ರಮಗಳಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಎಂದು ಫೌಸಿ ಹೇಳಿದ್ದಾರೆ.

ಹೊಸ ರೂಪಾಂತರಿ ಪತ್ತೆಯಾದ ದೇಶದ ಜೊತೆ ವೈರಸ್ ಹೆಸರು ಜೋಡಿಸುವುದಿಲ್ಲ; WHO ಸ್ಪಷ್ಟನೆ

ಭಾರತದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ. ಇದು ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಿದೆ. ಕೊರೋನಾ 2ನೇ ಅಥವಾ 3ನೇ ಅಲೆ ಅಂತ್ಯಗೊಂಡರೂ ಕೊರೋನಾ ಅಧ್ಯಾಯ ಮುಗಿದಿದೆ ಎಂದು ಭಾವಿಸುವುದು ತಪ್ಪು. ಕಾರಣ ಇಡಿ ವಿಶ್ವದಿಂದ ಕೊರೋನಾ ಸಂಪೂರ್ಣ ನಿರ್ಮೂಲನೆಯಾಗಬೇಕು. ಇಷ್ಟಾದರೂ ಎಚ್ಚರಿಕೆ ಮರೆತರೆ ಮತ್ತೊಮ್ಮೆ ಅಪಾಯ ತಪ್ಪಿದ್ದಲ್ಲ ಎಂದು ಫೌಸಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ