ಎಂಟು ವರ್ಷಗಳ ಬಳಿಕ ಪತ್ತೆಯಾದ ಭಾರತೀಯ ವಾಯುಸೇನೆ ವಿಮಾನದ ಅವಶೇಷ!

Published : Jan 12, 2024, 05:01 PM IST
ಎಂಟು ವರ್ಷಗಳ ಬಳಿಕ ಪತ್ತೆಯಾದ ಭಾರತೀಯ ವಾಯುಸೇನೆ ವಿಮಾನದ ಅವಶೇಷ!

ಸಾರಾಂಶ

ಎಂಟು ವರ್ಷಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಾಯುಸೇನೆಯ ವಿಮಾನದ ಅವಶೇಷ ಕೊನೆಗೂ ಪತ್ತೆಯಾಗಿದೆ. ಚೆನ್ನೈ ಕರಾವಳಿಯಿಂದ 310 ಕಿಲೋಮೀಟರ್‌ ದೂರದಲ್ಲಿ 3.4 ಕಿಲೋಮೀಟರ್‌ ಆಳದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದೆ.

ನವದೆಹಲಿ (ಜ.12): ಎಂಟು ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತು ಅಚ್ಚರಿಯ ರೀತಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಾಯುಸೇನೆಯ ಟ್ರಾನ್ಸ್‌ಪೋರ್ಟ್‌ ವಿಮಾನದ ಅವಶೇಷಗಳು ಕೊನೆಗೂ ಪತ್ತೆಯಾಗಿದೆ. 2016ರ ಜುಲೈ 22 ರಂದು ಈ ವಿಮಾನ ಬಂಗಾಳ ಕೊಲ್ಲಿಯಲ್ಲಿ ಅಚ್ಚರಿಯ ರೀತಿಯಲ್ಲಿ ನಾಪತ್ತೆಯಾಗಿತ್ತು. ಅಂದಾಜು 8 ವರಷ್ಳ ಬಳಿಕ ಚೆನ್ನೈ ಕರಾವಳಿಯಿಂದ 310 ಕಿಲೋಮೀಟರ್‌ ದೂರದಲ್ಲಿ 3.4 ಕಿಲೋಮೀಟರ್‌ ಆಳದಲ್ಲಿ ಈ ವಿಮಾನದ ಅವಶೇಷಗಳು ಪತ್ತೆಯಾಗಿದೆ. 2016ರ ಜುಲೈ 22ರ ಬೆಳಗ್ಗೆ ಭಾರತೀಯ ವಾಯುಸೇನೆಯ ಆಂಟೋನೋವ್‌ ಎನ್‌ 32 ಕೆ 2743 ವಿಮಾನ ಚೆನ್ನೈನ ತಾಂಬರಂ ಏರ್‌ಫೋರ್ಸ್‌ ಸ್ಟೇಷನ್‌ನಿಂದ ಹಾರಾಟ ಆರಂಭಿಸಿತ್ತು. ವಿಮಾನದ ಸಿಬ್ಬಂದಿಯೊಂದಿಗೆ ಒಟ್ಟು 29 ಮಂದಿ ಇದರಲ್ಲಿದ್ದರು. ಅಂಡಮಾನ್‌ ನಿಕೋಬಾರ್‌ ಐಸ್ಲೆಂಡ್‌ನ ಪೋರ್ಟ್‌ಬ್ಲೇರ್‌ಗೆ ಪ್ರತಿವಾರದಂತೆ ಈ ವಿಮಾನ ಟ್ರಿಪ್‌ ಆರಂಭಿಸಿತ್ತು. ಬೆಳಗ್ಗೆ 8 ಗಂಟೆಗೆ ಚೆನ್ನೈನಿಂದ ಹಾರಾಟ ಆರಂಭಿಸಿದ್ದ ವಿಮಾನ, ಪೋರ್ಟ್‌ ಬ್ಲೇರ್‌ನ ಭಾರತೀಯ ನೌಕಾಸೇನೆಯ ಏರ್‌ ಸ್ಟೇಷನ್‌ ಐಎನ್‌ಎಸ್‌ ಉತ್ಕೋರ್ಷ್‌ನಲ್ಲಿ ಲ್ಯಾಂಡ್‌ ಆಗಬೇಕಿತ್ತು.

ಆದರೆ, ವಿಮಾನ ಹಾರಾಟ ಆರಂಭವಾದ ಕೆಲವೇ ಹೊತ್ತಿನಲ್ಲಿ ಗ್ರೌಂಡ್‌ ಸ್ಟೇಷನ್‌ನೊಂದಿಗೆ ತನ್ನೆಲ್ಲಾ ಸಂಪರ್ಕವನ್ನು ಕಳೆದುಕೊಂಡಿತ್ತು. ಬಂಗಾಳಕೊಲ್ಲಿಯಲ್ಲಿ ವಿಮಾನ ಹಾರಾಟದ ವೇಳೆ ರಾಡಾರ್‌ನ ಸಂಪರ್ಕಕ್ಕೂ ಇದು ಸಿಕ್ಕಿರಲಿಲ್ಲ. ಅಂದಿನಿಂದ ಏರ್‌ಫೋರ್ಸ್‌, ನೌಕಾಸೇನೆ ಹಾಗೂ ಭಾರತೀಯ ಸರ್ಕಾರದ ಸಂಬಂಧಿತ ಇಲಾಖೆ ದೊಡ್ಡ ಪ್ರಮಾಣದ ಶೋಧ ಕಾರ್ಯ ನಡೆಸಿದರೂ ಈ ವಿಮಾನದ ಸಣ್ಣ ಮಾಹಿತಿ ಕೂಡ ಲಭ್ಯವಾಗಿರಲಿಲ್ಲ. ಸಮುದ್ರದಲ್ಲಿ ಕಾಣೆಯಾದ ವಿಮಾನಕ್ಕಾಗಿ ಭಾರತ ಈವರೆಗೂ ನಡೆಸಿರುವ ಅತಿದೊಡ್ಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇದಾಗಿತ್ತು.

 

ನಾಪತ್ತೆಯಾಗಿದ್ದ AN-32 ವಿಮಾನದಲ್ಲಿದ್ದವರು ಮೃತಪಟ್ಟಿದ್ದಾರೆ: ವಾಯುಸೇನೆ

ಸಾಕಷ್ಟು ಹುಡುಕಾಟದ ಬಳಿಕ 2016ರ ಸೆಪ್ಟೆಂಬರ್‌ 15 ರಂದು ಭಾರತೀಯ ವಾಯುಸೇನೆ ತನ್ನ ಶೋಧ ಕಾರ್ಯವನ್ನು ವಿಫಲವಾಗಿದ್ದಾಗಿ ಘೋಷಿಸಿ ಕಾರ್ಯಚರಣೆ ಮುಕ್ತಾಯ ಮಾಡಿತ್ತು. ಅದರೊಂದಿಗೆ ವಿಮಾನದಲ್ಲಿದ್ದ ಎಲ್ಲಾ 29 ಕುಟುಂಬಗಳಿಗೆ ಪತ್ರ ಬರೆದ ಏರ್‌ಫೋರ್ಸ್‌, ನಾಪತ್ತೆಯಾಗಿರುವ ವಿಮಾನದ ಅವಶೇಷಗಳನ್ನು ಪತ್ತೆ ಮಾಡುವ ಎಲ್ಲಾ ಪ್ರಯತ್ನ ವಿಫಲವಾಗಿದೆ. ಹಾಗಾಗಿ ನಮ್ಮ ಮುಂದೆ ಯಾವುದೇ ಆಯ್ಕೆಗಳು ಇರದ ಕಾರಣ, ವಿಮಾನದಲ್ಲಿದ್ದ ಎಲ್ಲರೂ ಸತ್ತುಹೋಗಿರಬಹುದು ಎಂದು ಘೋಷಣೆ ಮಾಡುತ್ತಿರುವುದಾಗಿ ತಿಳಿಸಿತ್ತು.

13 ಜನರಿದ್ದ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?