
ನವದೆಹಲಿ(ಮೇ.18): ಜಮ್ಮ ಮತ್ತು ಕಾಶ್ಮೀರದ ಗಡಿ ಭಾಗಗಳಲ್ಲಿ ಭಾರತೀಯ ಸೇನಾ ಕಾರ್ಯಚರಣೆ ಮುಂದುವರಿದಿದೆ. ಇಂದು(ಮೇ.18) ಹಿಜ್ಬುಲ್ ಮುಜಾಹಿದ್ದೀನ್ ಸ್ಫೋಟಕ ತಜ್ಞನನ್ನು ಸೇನೆ ಹೊಡೆದುರಳಿಸಿದೆ. ಇತ್ತೀಚೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ರಿಜಾಯ್ ನೈಕೂನನ್ನು ಹೊಡೆದುರುಳಿಸಿತ್ತು. ಒಂದೆಡೆ ಭಾರತ ಕೊರೋನಾ ವಿರುದ್ಧ ಯುದ್ಧ ಸಾರಿದ್ದರೆ, ಇತ್ತ ಪಾಕಿಸ್ತಾನ ಕಾಶ್ಮೀರದಲ್ಲಿ ಅಶಾಂತಿ ನಿರ್ಮಿಸುವ ಪ್ರಯತ್ನ ಮಾಡುತ್ತಿದೆ. ಇದೀಗ ವಾಯುಸೇನಾ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಬದೌರಿಯಾ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಸ್ಫೋಟಕ ತಜ್ಞ ಮಟಾಶ್, ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ಭಾಗದಲ್ಲಿ ಹಾಗೂ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣ, ಕ್ಯಾಂಪ್ಗಳನ್ನ ಧ್ವಂಸಗೊಳಿಸಲು ಭಾರತೀಯ ಸೇನೆ ಸಿದ್ದವಿದೆ. ದಿನದ 24 ಗಂಟೆಯೂ ವಾಯುಸೇನೆ ಸನ್ನದ್ದವಾಗಿದೆ. ಪರಿಸ್ಥಿತಿ ಎದುರಾದರೆ ಪಾಕ್ ಆಕ್ರಮಿತ ಕಾಶ್ಮೀರದಲ್ಲೂ ಕಾರ್ಯಚರಣೆ ನಡೆಸಲಿದ್ದೇವೆ ಎಂದ ರಾಕೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆಯನ್ನು ನಿಲ್ಲಿಸಬೇಕು. ಭಾರತದ ಗಡಿಯೊಳಕ್ಕೆ ಭಯೋತ್ಪಾದರನ್ನು ನುಗ್ಗಿಸುವ ಸಾಹಸಕ್ಕೆ ಅಂತ್ಯ ಹಾಡಬೇಕು ಎಂದಿದ್ದಾರೆ. ಇಷ್ಟೇ ಅಲ್ಲ ಭಾರತದೊಳಗೆ ಉಗ್ರರ ದಾಳಿಯಾದಾಗ, ಪಾಕಿಸ್ತಾನ ಹೆಚ್ಚು ಅಲರ್ಟ್ ಆಗುತ್ತದೆ. ಗಡಿಯಲ್ಲಿ ಹೆಚ್ಚು ಸೇನೆಯ ನಿಯೋಜನೆ, ವಾಯುಸೇನೆಯಿಂದ ಗಸ್ತು ಸೇರಿದಂತೆ ಹಲವು ಚಟುವಟಿಕೆ ಆರಂಭಿಸುತ್ತದೆ. ಇದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಅನ್ನೋದು ಜಗತ್ತಿಗೆ ಸಾರಿ ಹೇಳುತ್ತದೆ ಎಂದರು.
ಚೀನಾ ಸೇನೆ ಲಡಾಕ್ ಪ್ರದೇಶದಲ್ಲಿ ವಾಯು ಗಡಿ ಉಲ್ಲಂಘನೆ ಮಾಡಿರುವುದುು ಬೆಳಕಿಗೆ ಬಂದಿದೆ. ಲಹೌಲ್ ಸ್ಪಿತಿ ಜಿಲ್ಲೆಯ ಸಮ್ಧೋ ವಲಯ ಬಳಿ ಚೀನಾದ ಹೆಲಿಕಾಪ್ಟರ್ ಸುಮಾರು 12 ರಿಂದ 15 ಕಿ.ಮೀ ಗಡಿಯೊಳಕ್ಕೆ ಪ್ರವೇಶಿಸಿದೆ. ಈ ಕುರಿತು ಗಮನಹರಿಸಲಾಗಿದೆ. ಇಷ್ಟೇ ಅಲ್ಲ ಎಚ್ಚರಿಕೆ ನೀಡಲಾಗಿದೆ ಎಂದು ರಾಕೇಶ್ ಕುಮಾರ್ ಸಿಂಗ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ