ಉಧಂಪುರ ಬಳಿ ಸೇನಾ ಹೆಲಿಕಾಪ್ಟರ್‌ ಪತನ, ಮುಂದುವರಿದ ರಕ್ಷಣಾ ಕಾರ್ಯ!

Published : Sep 21, 2021, 01:52 PM IST
ಉಧಂಪುರ ಬಳಿ ಸೇನಾ ಹೆಲಿಕಾಪ್ಟರ್‌ ಪತನ, ಮುಂದುವರಿದ ರಕ್ಷಣಾ ಕಾರ್ಯ!

ಸಾರಾಂಶ

* ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ * ಪೈಲಟ್ ಹಾಗೂ ಸಹ ಪೈಲಟ್‌ ಇಬ್ಬರಿಗೂ ಗಾಯ * ಕೆಟ್ಟ ಹವಾಮಾನದಿಂದ ದುರಂತ ಸಂಭವಿಸಿರುವ ಸಾಧ್ಯತೆ

ಶ್ರೀನಗರ(ಸೆ.21): ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಶಿವ ಗರ್‌ಧಾರ್​​ನಲ್ಲಿ ಮಂಗಳವಾರ ಭಾರತೀಯ ಸೇನೆಯ ಹೆಲಿಕಾಪ್ಟರ್‌ ಪತನಗೊಂಡಿದೆ. ಮಂಜು ಮುಸುಕಿದ ವಾತಾವರಣವಿದ್ದ ಕಾರಣ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಇನ್ನು ಈ ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕೆಟ್ಟ ಹವಾಮಾನದಿಂದಾಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಅಥವಾ ನೆಲಕ್ಕೆ ಅಪ್ಪಳಿಸಿರಬಹುದೆಂದು ಅಂದಾಜಿಸಲಾಘಿದೆ. ಹೀಗಿದ್ದರೂ ಈ ದುರಂತಕ್ಕೇನು ಕಾರಣ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪೈಲಟ್ ಮತ್ತು ಸಹ ಪೈಲಟ್ ಇಬ್ಬರೂ ಗಾಯಗೊಂಡಿದ್ದು, ಮಾಹಿತಿ ಪಡೆದ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸದ್ಯ ಇಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಇನ್ನು ದುರಂತದ ಬಗ್ಗೆ ಸ್ಥಳಿಯರಿಂದ ಮಾಹಿತಿ ಕಲೆ ಹಾಕಿರುವ ಸುದ್ದಿಸಂಸ್ಥೆ ಎಎನ್‌ಐ 'ಹೆಲಿಕಾಪ್ಟರ್‌ ಪಟನೀಟಾಪ್‌ ಸಮೀಪ ಭಾರೀ ಕೆಳ ಮಟ್ಟದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಸ್ಥಳೀಯರು ತಿಳಿಸಿರುವುದಾಗಿ ಟ್ವೀಟ್ ಮಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

West Bengal: ಸಿಎಂ ಸ್ಥಾನ ಬಿಡಲ್ಲ ಎಂದು ಮಮತಾ ಬ್ಯಾನರ್ಜಿ ಹಠ; ಮುಂದೇನು ಮಾಡಬಹುದು?
India Latest News Live: West Bengal - ಸಿಎಂ ಸ್ಥಾನ ಬಿಡಲ್ಲ ಎಂದು ಮಮತಾ ಬ್ಯಾನರ್ಜಿ ಹಠ; ಮುಂದೇನು ಮಾಡಬಹುದು?