
ಶ್ರೀನಗರ(ಅ.20): ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಅವರಿತ ಪ್ರಯತ್ನಿಸುತ್ತಿರವ ಭಾರತೀಯ ಸೇನೆ ಶೋಪಿಯಾನ್ ಜಿಲ್ಲೆಯಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದೆ. ಮೆಲ್ಹೊರ ವಲಯದಲ್ಲಿ ನಡೆದ ಉಗ್ರರ ಜೊತೆಗಿನ ಕಾಳಗಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದೆ.
ನಿನಗೇನೂ ಆಗಲ್ಲ ಕಂದ: ಶರಣಾಗುವಂತೆ ಉಗ್ರನ ಮನವೊಲಿಸಿದ ಭಾರತೀಯ ಸೇನೆ ಯೋಧ!.
ಖಚಿತ ಮಾಹಿತಿ ಮೇರೆ ಕಾರ್ಯಚರಣೆ ನಡೆಸಿದ ಭಾರತೀಯ ಸೇನೆ ಒಟ್ಟು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಇಷ್ಟೇ ಅಲ್ಲ ಎಕೆ ರೈಫಲ್ ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಹಿಜ್ಬ್ ಉಲ್ ಮುಜಾಹೀದ್ದೀನ್ ಸಂಘಟನೆಯ ತೌಸೀಫ್ ಅಹಮ್ಮದ್ ಖಾಂಡೆ ಹಾಗೂ ಉಮರ್ ತೊಕ್ರೆ ಎಂದು ಗುರುತಿಸಿಲಾಗಿದೆ.
ಭಾರತದ ಗಡಿಯೊಳಕ್ಕೆ ನುಸುಳಲು ಉಗ್ರರಿಗೆ ಪಾಕ್ ನೆರವು; ಸಿಸಿಟಿವಿಯಲ್ಲಿ ಕುತಂತ್ರ ಬಯಲು!
ಉಗ್ರರು ಕುಲುಗಾಂ ಗ್ರಾಮದವರಾಗಿದ್ದು, ಇತ್ತೀಚೆಗೆ ಕುಲುಗಾಂ ಹಾಗೂ ಶೋಪಿಯಾನ್ ವಲಯದಲ್ಲಿ ನಡೆದ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಸೇನೆ ಕೂಬಿಂಗ್ ನಡೆಸಿತ್ತು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ದಿಟ್ಟ ಉತ್ತರ ನೀಡಿದ ಭಾರತೀಯ ಸೇನೆ ಇಬ್ಬರೂ ಉಗ್ರರನ್ನು ಹೊಡೆದುರುಳಿಸಿದೆ. ಕಾರ್ಯಚರಣೆ ಅಂತ್ಯಗೊಂಡಿರುವುದಾಗಿ ಗುರಿತು ಭಾರತೀಯ ಸೇನೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ