ಮೋದಿ ಕೈಯಲ್ಲಿ ಅಸ್ಸಾಲ್ಟ್ ರೈಫಲ್: ಸಿಕ್ಕ ಬಲಕ್ಕೆ ಸೈನಿಕರಿಗೆ ಖುಷಿಯಾಗಿದೆ ಫುಲ್!

Suvarna News   | Asianet News
Published : Dec 15, 2019, 01:38 PM IST
ಮೋದಿ ಕೈಯಲ್ಲಿ ಅಸ್ಸಾಲ್ಟ್ ರೈಫಲ್: ಸಿಕ್ಕ ಬಲಕ್ಕೆ ಸೈನಿಕರಿಗೆ ಖುಷಿಯಾಗಿದೆ ಫುಲ್!

ಸಾರಾಂಶ

ಭಾರತೀಯ ಸೇನೆ ಬತ್ತಳಿಕೆ ಸೇರಿದ ಎಸ್ಐಜಿ-716 ಅಸ್ಸಾಲ್ಟ್ ರೈಫಲ್ಸ್| ಅಮೆರಿಕ ನಿರ್ಮಿತ ವಿಧ್ವಂಸಕ ಎಸ್ಐಜಿ-716 ಅಸ್ಸಾಲ್ಟ್ ರೈಫಲ್ಸ್| 15  ವರ್ಷಗಳ ಸೇನೆಯ ಬೇಡಿಕೆ ಈಡೇರಿಸಿದ ಮೋದಿ ಸರ್ಕಾರ| ಮುಂಚೂಣಿ ನೆಲೆಗಳಲ್ಲಿರುವ ಸೈನಿಕರಿಗೆ ಮಾತ್ರ ರೈಫಲ್ ಪೂರೈಕೆ| ದೂರದ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಸ್ಐಜಿ-716 ಅಸ್ಸಾಲ್ಟ್ ರೈಫಲ್ಸ್| ಅಮೆರಿಕದ ಎಸ್​ಐಜಿ ಸೌರ್ ಸಂಸ್ಥೆಯಿಂದ 72,400 ಅಸಾಲ್ಟ್ ರೈಫಲ್ಸ್​ ಖರೀದಿ|

ನವದೆಹಲಿ(ಡಿ.15): ಭಾರತೀಯ ಸೇನೆಯ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದ್ದು, ಅಮೆರಿಕದ ವಿಧ್ವಸಂಕ ಎಸ್ಐಜಿ-716 ಅಸ್ಸಾಲ್ಟ್ ರೈಫಲ್ಸ್ ಸೈನಿಕರ ಕೈ ಸೇರಿದೆ.

ಸುಮಾರು 15 ವರ್ಷಗಳ ಬಳಿಕ ಭಾರತೀಯ ಸೇನೆಗೆ ಅಮೆರಿಕ ನಿರ್ವಿುತ ಹೊಸ ಎಸ್​ಐಜಿ-716 ಅಸಾಲ್ಟ್ ರೈಫಲ್ ಪೂರೈಕೆಯಾಗುತ್ತಿದೆ. ದೂರದ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಈ ರೈಫಲ್​ಗಳನ್ನು ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿನ ಮುಂಚೂಣಿ ನೆಲೆಗಳಲ್ಲಿರುವ ಸೈನಿಕರಿಗೆ ಮಾತ್ರ ಮೀಸಲಾಗಿಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಎರಡನೇ ಹಂತದ ನೆಲೆಗಳಲ್ಲಿರುವ ಸೈನಿಕರಿಗೆ ರಷ್ಯಾ ಸಹಭಾಗಿತ್ವದಲ್ಲಿ ತಯಾರಿಸಲಾಗುತ್ತಿರುವ ಕಲಾಶ್ನಿಕೋವ್ ರೈಫಲ್​ಗಳನ್ನು ಪೂರೈಸಲಾಗುವುದು ಎಂದು ಸೇನೆ ಹೇಳಿದೆ. 

ಪ್ರಸ್ತುತ ಬಳಕೆಯಲ್ಲಿರುವ 5.56 ಎಂಎಂ ಇನ್ಸಾಸ್ ರೈಫಲ್​ಗಳನ್ನು ಬದಲಿಸಲು ಸೇನೆ 2005ರಲ್ಲಿ ಬೇಡಿಕೆ ಇಟ್ಟಿತ್ತು. 382 ಬೆಟಾಲಿಯನ್​ಗಳಿಗೆ ಅತ್ಯಾಧುನಿಕ ಗನ್​ಗಳನ್ನು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. 

ಚೀನಾ ಗಡಿಯ ಯೋಧರಿಗೆ 73000 ಅಮೆರಿಕನ್‌ ರೈಫಲ್‌

ಈಗ 15 ವರ್ಷಗಳ ಬಳಿಕ ಈ ರೈಫಲ್ಸ್ ಸೇನೆ ಕೈಸೇರುತ್ತಿವೆ. ನಿರ್ಣಾಯಕ ಕಾರ್ಯಾಚರಣೆಗಳ ಅವಶ್ಯಕತೆಗಳಿಗಾಗಿ ಭಾರತ ಅಮೆರಿಕದ ಎಸ್​ಐಜಿ ಸೌರ್ ಸಂಸ್ಥೆಯಿಂದ 72,400 ಅಸಾಲ್ಟ್ ರೈಫಲ್ಸ್​ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. 

ಇದರಲ್ಲಿ 10 ಸಾವಿರ ಎಸ್​ಐಜಿ-716 ರೈಫಲ್ಸ್ ಸೇನೆ ಈಗಾಗಲೇ ಸ್ವೀಕರಿಸಿದೆ. ಬಾಕಿ ರೈಫಲ್ ಗಳು ಕಾಲಾನುಕ್ರಮದಲ್ಲಿ ಹಂತಹಂತವಾಗಿ ಸೈನಿಕರ ಕೈ ಸೇರಲಿವೆ ಎಂದು ಸೇನೆ ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!