
ನವದೆಹಲಿ(ಸೆ.06): ಉತ್ತರ ಸಿಕ್ಕಿಂ ಗಡಿ ಭಾಗದಲ್ಲಿ ಸಂಕಷ್ಟಕ್ಕೆ ಸಿಲುಕಿ, ಜೀವನ್ಮರಣ ಸ್ಥಿತಿಯಲ್ಲಿದ್ದ ಮೂವರು ಚೀನೀ ನಾಗರಿಕರಿಗೆ ಭಾರತೀಯ ಸೇನೆ ಕೃತಕ ಆಮ್ಲಜನಕ, ಆಹಾರ, ಬೆಚ್ಚಗಿನ ಬಟ್ಟೆಗಳು ಹಾಗೂ ವೈದ್ಯಕೀಯ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.
ಶೂನ್ಯಕ್ಕಿಂತ ಕಡಿಮೆ ತಾಪಮಾನದ ಮೈ ಕೊರೆಯುವ ಚಳಿಯಲ್ಲಿ ಉತ್ತರ ಸಿಕ್ಕಿಂ ಗಡಿ ಪ್ರದೇಶದಲ್ಲಿ ಓರ್ವ ಮಹಿಳೆ ಸೇರಿ ಮೂವರು ಚೀನಾದ ನಾಗರಿಕರು ದಾರಿ ತಪ್ಪಿಸಿಕೊಂಡು ಪರದಾಡುತ್ತಿದ್ದರು. ಈ ವೇಳೆ ಈ ತತ್ಕ್ಷಣ ಸ್ಥಳಕ್ಕೆ ದೌಡಾಯಿಸಿದ ಭಾರತದ ಯೋಧರು, ಅವರಿಗೆ ಅಗತ್ಯವಿರುವ ನೆರವು ನೀಡಿದ್ದಾರೆ.
ಅಲ್ಲದೆ, ಅವರು ಸೇರಬೇಕಾದ ಸ್ಥಳಕ್ಕೆ ತಲುಪಲೂ ನೆರವಾಗಿದ್ದಾರೆ. ಗಡಿ ಬಿಕ್ಕಟ್ಟು ಮುಂದುವರಿದಾಗಲೂ, ಚೀನಿಯರಿಗೆ ನೆರವಾಗಿದ್ದಕ್ಕೆ ಸೇನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ