ಕುತಂತ್ರಿ ಪಾಕ್‌ ಉದ್ಧಟತನ; ದೇಶಕ್ಕಾಗಿ ಪ್ರಾಣಕೊಟ್ಟ ಇಬ್ಬರು ಯೋಧರು

Published : Sep 05, 2020, 09:05 PM IST
ಕುತಂತ್ರಿ ಪಾಕ್‌ ಉದ್ಧಟತನ; ದೇಶಕ್ಕಾಗಿ ಪ್ರಾಣಕೊಟ್ಟ ಇಬ್ಬರು ಯೋಧರು

ಸಾರಾಂಶ

ಪಾಕಿಸ್ತಾನದ ದಿಂದ ಕದನ ವಿರಾಮ ಉಲ್ಲಂಘನೆ/  ಗಡಿಯಲ್ಲಿ ಗುಂಡಿನ ಚಕಮಕಿ/  ಇಬ್ಬರು ಯೋಧರು ಹುತಾತ್ಮ/  ಉತ್ತರ ಕಾಶ್ಮೀರದ ನೌಗಮ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ದಿಂದ ಕದನ ವಿರಾಮ ಉಲ್ಲಂಘನೆ/

ಶ್ರೀನಗರ(ಸೆ. 05) ಕುತಂತ್ರಿ ಪಾಕಿಸ್ತಾನಕ್ಕೆ ಮಾತ್ರ ಬುದ್ಧಿ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಗಡಿಯಲ್ಲಿ ಗುಂಡಿನ ಚಕಮಕಿ ನಡೆಸಿದೆ.

ಪಾಕ್ ನೊಂದಿಗಿನ ಸೆಣೆಸಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಕಾಶ್ಮೀರದ ನೌಗಮ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಇಬ್ಬರು ಯೋಧರಿಗೆ ಗಾಯವಾಗಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.

ಇದು ಭಾರತ, ದಾರಿತಪ್ಪಿ ಅಂಡಲೆಯುತ್ತಿದ್ದ ಚೀನಾ ಪ್ರಜೆಗಳ ರಕ್ಷಣೆ ಮಾಡಿದ ಸೇನೆ

ಪೂಂಚ್ ಜಿಲ್ಲೆಯ ಶಹ್ ಪುರ್, ಕಿರ್ನಿ ಮತ್ತು ದೆಗ್ವಾರ್ ವಲಯಗಳಲ್ಲಿ ಗುಂಡಿನ ಮತ್ತು ಶೂಟಿಂಗ್ ದಾಳಿ ಶನಿವಾರ ಬೆಳಗ್ಗೆ ಕಾಲು ಕೆದರಿಕೊಂಡು ಬಂದ ಪಾಕಿಸ್ತಾನ ಕಾರಣವಿಲ್ಲದೆ ಗುಂಡಿನ ದಾಳಿ ನಡೆಸಿದ್ದು ವರದಿಯಾಗಿತ್ತು.

ಇತ್ತ ಲಡಾಕ್ ಗಡಿಯಲ್ಲಿ ಚೀನಾ ತಂಟೆ ಮಾಡುತ್ತಿದ್ದರೆ ಅತ್ತ ಪಾಕಿಸ್ತಾನ ಮತ್ತೆ ಮತ್ತೆ ಕುತಂತ್ರಿ ಬುದ್ಧಿಯ ಪ್ರದರ್ಶನ ಮಾಡುತ್ತಿದೆ. ಭಾರತೀಯ ಸೇನೆ ಸೆಣೆಸಾಟಕ್ಕೆ ಸರ್ವಸನ್ನದ್ಧವಾಗಿದೆ ಎಂದು ರಕ್ಷಣಾ ಇಲಾಖೆ ಈ ಹಿಂದೆಯೇ  ಹೇಳಿತ್ತು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ
18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು