ಭಾರತ- ಚೀನಾ ಸೈನಿಕರ ನಡುವೆ ಗಡಿಯಲ್ಲಿ ಘರ್ಷಣೆ!

Published : May 10, 2020, 01:52 PM ISTUpdated : May 10, 2020, 02:11 PM IST
ಭಾರತ- ಚೀನಾ ಸೈನಿಕರ ನಡುವೆ ಗಡಿಯಲ್ಲಿ ಘರ್ಷಣೆ!

ಸಾರಾಂಶ

ಉತ್ತರ ಸಿಕ್ಕಿಂ ಗಡಿ ಭಾಗದಲ್ಲಿ ಚೀನಾ- ಭಾರತ ಸೈನಿಕರ ನಡುವೆ ಘರ್ಷಣೆ| ಉದ್ಧಟತನ ಮೆರೆದ ಚೀನಾ ಸೈನಿಕರು| ಏಕಾಏಕಿ ಭಾರತದ ಗಡಿ ಪ್ರವೇಶಿಸಿದ ಚೀನಿಯರು| ಚೀನಾ ಸೈನಿಕರ ಉದ್ಧಟತನಕ್ಕೆ ಭಾರತೀಯ ಯೋಧರಿಂದ ತಕ್ಕ ಪ್ರತ್ಯುತ್ತರ

ಸಿಕ್ಕಿಂ(ಮೇ.10): ಉತ್ತರ ಸಿಕ್ಕಿಂ ಗಡಿಯಲ್ಲಿ ಭಾರತೀಯ ಸೇನೆ ಹಾಗೂ ಚೀನಾದ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಇಲ್ಲಿನ ನಾಕು ಲಾ ಪ್ರಾಂತ್ಯದಲ್ಲಿ ಸೈನಿಕರ ನಡುವಿನ ಈ ಘರ್ಷಣೆ ನಡೆದಿದ್ದು,  ವರದಿಗಳನ್ವಯ ಎರಡೂ ಕಡೆಗಳಲ್ಲಿ ಅನೇಕ ಸೈನಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಂಡಿಲ್ಲವಾದರೂ, ಚೀನಾ ಸೇನೆಗೆ ಭಾರತೀಯ ಯೋಧರು ತಕ್ಕ ಉತ್ತರ ನೀಡಿದ್ದು, ಅವರನ್ನು ಗಡಿಯಿಂದ ಹೊರದಬ್ಬುವಲ್ಲಿ ಯಶಸ್ವಿಯಾಗಿದ್ದಾರೆನ್ನಲಾಗಿದೆ.

ಏಕಾಏಕಿ ಚೀನಿ ಸೈನಿಕರ ಗುಂಪು ಭಾರತೀಯ ಗಡಿ ಪ್ರವೇಶಿಸಿ, ಸೈನಿಕರೊಂದಿಗೆ ವಿನಾಕಾರಣ ಜಗಳಕ್ಕಿಳಿದಿದ್ದಾರೆ. ಇದಕ್ಕೆ ತಕ್ಕ ಉತ್ತರನೀಡಿದ ಭಾರತೀಯ ಸೈನಿಕರು, ದೈಹಿಕ ಬಲದಿಂದಲೇ ಚೀನಿ ಸೈನಿಕರನ್ನು ಹಿಮ್ಮೆಟ್ಟಿಸಿ ಗಡಿಯಿಂದಾಚೆ ದಬ್ಬಿದ್ದಾರೆ. ಭಾರತ-ಚೀನಾ ಸೇನೆ ನಡುವಿನ ಈ ತಿಕ್ಕಾಟ ತಾತ್ಕಾಲಿಕವಾಗಿತ್ತು ಎಂದು ಭಾರತೀಯ ಸೇನೆ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಲಾಕ್‌ಡೌನ್ ಎಫೆಕ್ಟ್‌: ಈ ಒಂದು ವಿಚಾರದಲ್ಲಿ ಅಮೆರಿಕವನ್ನೇ ಮೀರಿಸಿದ ಭಾರತ!

ಕಳೆದ ವರ್ಷವೂ ಭಾರತ ಹಾಗೂ ಚೀನಾ ಸೈನಿಕರ ನಡುವೆ ಘರ್ಷಣೆಯಾದ ಸುದ್ದಿ ಬಹಿರಂಗವಾಗಿದ್ದವು. ಲಡಾಖ್‌ನ ಪೆಂಗಾಂಗ್ ಸರೋವರದ ಬಳಿ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿತ್ತು.  ಈ ಕಾರಣದಿಂದಾಗಿ ಉಭಯ ದೇಶಗಳ ನಡುವೆ 'ಫೇಸ್‌ಆಫ್' ಸನ್ನಿವೇಶ ಸೃಷ್ಟಿಯಾಗಿತ್ತು, ಆದರೆ ಇದಾದ ಬಳಿಕ ಉಭಯ ದೇಶಗಳ ಬ್ರಿಗೇಡಿಯರ್ ಮಟ್ಟದ ಸಂವಾದದ ಬಳಿಕ ವಿಚಾರ ಬಗೆಹರಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ