ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿ ತವರಿಗೆ ವಾಪಸ್!

By Suvarna NewsFirst Published Apr 18, 2024, 5:41 PM IST
Highlights

ಜಾಗತಿಕವಾಗಿ ಭಾರತ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಮತ್ತೊಮ್ಮೆ ಭಾರತ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಇಸ್ರೇನ್ ಮೇಲಿನ ಯುದ್ದದ ನಡುವೆ ಇರಾನ್ ವಶಪಡಿಸಿದ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ ಸುರಕ್ಷಿತವಾಗಿ ಮರಳಿದ್ದಾರೆ.
 

ನವದೆಹಲಿ(ಏ.18) ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಲವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ಈ ದಾಳಿಗೂ ಮೊದಲು ಇಸ್ರೇಲ್ ಮೂಲದ ಹಡಗಿನ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಈ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳು ಸಿಲುಕಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಭಾರತ, ರಾಜತಾಂತ್ರಿಕ ಮಾತುಕತೆ ನಡೆಸಿ ಇದೀಗ ಈ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ತವರಿಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಕೇರಳದ ತ್ರಿಶೂರು ಮೂಲದ ಆ್ಯನ್ ತೀಸಾ ಜೊಸೆಫ್ ಮನೆಗೆ ಮರಳಿದ್ದಾರೆ. ಕುಟುಂಬದ ಸಂತಸ ಇಮ್ಮಡಿಗೊಂಡಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಭಾರತೀಯ ವಿದೇಶಾಂಗ ಇಲಾಖೆ, ಇರಾನ್ ವಶಪಡಿಸಿದ ಸರಕು ಹಡಗಿನಲ್ಲಿದ್ದ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಸುರಕ್ಷಿತವಾಗಿ ಮನಗೆ ಮರಳಿದ್ದಾರೆ. ಇರಾನ್ ಆಧಿಕಾರಿಗಳಿಗೆ ಧನ್ಯವಾದ. ಇನ್ನುಳಿದ ಭಾರತೀಯರ ಬಿಡುಗಡೆಗೆ ಇರಾನ್ ಅಧಿಕಾರಿಗಳ ಜೊತೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದೆ.

ಭಾರತಕ್ಕೆ ರಾಜತಾಂತ್ರಿಕ ಗೆಲುವು, ಇರಾನ್ ವಶಪಡಿಸಿದ ಹಡಗಿನಲ್ಲಿದ್ದ 17 ಭಾರತೀಯರ ಭೇಟಿಗೆ ಅವಕಾಶ!

ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು. ಇದರ ಪರಿಣಾಮ ಭಾರತೀಯ ಮಹಿಳಾ ಸಿಬ್ಬಂದಿಯನ್ನು ಇರಾನ್ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದೆ.

Indian deck cadet Ms. Ann Tessa Joseph from Thrissur, Kerala, a member of the crew on vessel MSC Aries returned home today. , with the support of Iranian authorities, facilitated her return. Mission is in touch with Iranian side to ensure the well being of the… pic.twitter.com/iE932Y4F4y

— Randhir Jaiswal (@MEAIndia)

 

ಇರಾನ್ ವಶಪಡಿಸಿದ ಹಡಗಿನಲ್ಲಿದ್ದ ಸಿಬ್ಬಂದಿಗಳ ಪೈಕಿ 17 ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಭಾರತಕ್ಕೆ ಮರಳಿದ್ದಾರೆ. ಇನ್ನುಳಿದ 16 ಸಿಬ್ಬಂದಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆದುಕೊಂಡು ಬರಲಾವುವುದು ಎಂದು ವಿದೇಶಾಂಗ ಇಲಾಖೆ ಹೇಳಿದೆ. ಭಾರತೀಯ ಸಿಬ್ಬಂದಿಗಳ ಭೇಟಿಗ ಇತ್ತೀಚೆಗೆ ಇರಾನ್ ಅವಕಾಶ ನೀಡಿತ್ತು. ಎಲ್ಲರನ್ನು ಭಾರತೀಯ ಅಧಿಕಾರಿಗಳು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಎಲ್ಲರು ಉತ್ತಮವಾಗಿದ್ದಾರೆ. ಶೀಘ್ರವೇ ತವರಿಗೆ ಮರಳಲಿದ್ದಾರೆ ಎಂದು ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಸ್ಥರಿಗೆ ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ.

ಇಸ್ರೇಲ್ ಟಾರ್ಗೆಟ್ ದಾಳಿ ಆರಂಭ, 17 ಭಾರತೀಯ ಸಿಬ್ಬಂದಿಗಳಿದ್ದ ಹಡಗು ವಶಪಡಿಸಿದ ಇರಾನ್!

ಏಪ್ರಿಲ್ 13 ರಂದು ಎಂಎಸ್‌ಸಿ ಅರೀಸ್‌ ಸರಕು ಹಡಗನ್ನು ಇರಾನ್ ಸೇನೆ ದಾಳಿ ನಡೆಸಿ ವಶಕ್ಕೆ ಪಡೆದಿತ್ತು. ಇಸ್ರೇಲ್‌ ಮೇಲಿನ ದಾಳಿಗೂ ಮುನ್ನ 3 ದಿನದ ಹಿಂದೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿತ್ತು. ಇದರಲ್ಲಿನ 25 ಸಿಬ್ಬಂದಿ ಪೈಕಿ 17 ಭಾರತೀಯರ ಬಿಡುಗಡೆಗೆ ಭಾರತ-ಇರಾನ್ ಜೊತೆ ಮಾತುಕತೆ ನಡೆಸಿತ್ತು. ಇತ್ತೀಚೆಷ್ಟೆಗೆ ಸಿಬ್ಬಂದಿಗಳ ಬೇಟಿಗೆ ಇರಾನ್ ಅವಕಾಶ ನೀಡಿತ್ತು. ಇರಾನ್‌ ಸರ್ಕಾರವು ಇಸ್ರೇಲ್‌ನೊಂದಿಗೆ ನಂಟು ಹೊಂದಿರುವ ಶಂಕೆ ಕಾರಣ ಪೋರ್ಚುಗೀಸ್‌ ಹಡಗು ಎಂಎಸ್‌ಸಿ ಅರೀಸ್‌ನನ್ನು ಹಾರ್ಮುಜ಼್ ಜಲಸಂಧಿಯಲ್ಲಿ ವಶಕ್ಕೆ ಪಡೆದು ಅದರಲ್ಲಿ ಕರ್ತವ್ಯ ನಿರತರಾಗಿದ್ದ 17 ಭಾರತೀಯ ಸಿಬ್ಬಂದಿಯೂ ಸೇರಿದಂತೆ ಒಟ್ಟು 25 ಮಂದಿಯನ್ನು ಬಂಧಿಸಿತ್ತು.

click me!