ವಾಯುದಾಳಿ ತಡೆಗೆ ಏರ್‌ಡಿಫೆನ್ಸ್ ಕಮಾಂಡ್ ಸ್ಥಾಪನೆ..?

Published : Aug 28, 2020, 11:31 AM IST
ವಾಯುದಾಳಿ ತಡೆಗೆ ಏರ್‌ಡಿಫೆನ್ಸ್ ಕಮಾಂಡ್ ಸ್ಥಾಪನೆ..?

ಸಾರಾಂಶ

ಎಲ್ಲವೂ ಅಂದುಕೊಂಡಂತೆ ನಡೆದರೆ ವಾಯುಪಡೆಯ ಸಂಸ್ಥಾಪನಾ ದಿನವಾದ ಅ.8ರಂದು ಏರ್‌ ಡಿಫೆನ್ಸ್‌ ಕಮಾಂಡ್‌ ವಿಭಾಗ ಸ್ಥಾಪನೆಯಾಗುವ ನಿರೀಕ್ಷೆ ಇದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಆ.28): ಚೀನಾದೊಂದಿಗಿನ ಗಡಿ ಬಿಕ್ಕಟ್ಟು ಮುಂದುವರೆದಿರುವಾಗಲೇ, ದೇಶದ ವಾಯುಸೀಮೆಯನ್ನು ಶತ್ರು ದೇಶಗಳಿಂದ ಕಾಪಾಡುವ ನಿಟ್ಟಿನಲ್ಲಿ ವಾಯು ರಕ್ಷಣಾ ವಿಭಾಗ (ಏರ್‌ ಡಿಫೆನ್ಸ್‌ ಕಮಾಂಡ್‌) ಎಂಬ ಹೊಸ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ವಾಯುಪಡೆಯ ಸಂಸ್ಥಾಪನಾ ದಿನವಾದ ಅ.8ರಂದು ಆ ವಿಭಾಗ ಸ್ಥಾಪನೆಯಾಗುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಏರ್‌ ಡಿಫೆನ್ಸ್‌ ಕಮಾಂಡ್‌ ತನ್ನ ನೆಲೆಯನ್ನು ಹೊಂದಿರಲಿದೆ. ದೇಶದ ಉತ್ತರ ಭಾಗದಲ್ಲಿರುವ ಪ್ರಮುಖ ವಾಯುನೆಲೆಗಳಾದ ಆಗ್ರಾ, ಗ್ವಾಲಿಯರ್‌ ಮತ್ತು ಬರೇಲಿಯ ವಾಯುನೆಲೆಗಳನ್ನು ನಿರ್ವಹಿಸುವ ಭಾರತೀಯ ವಾಯುಪಡೆಯ ಕೇಂದ್ರ ಕಮಾಂಡ್‌ ಜೊತೆಜೊತೆಗೆ ಹೊಸ ಏರ್‌ ಡಿಫೆನ್ಸ್‌ ಕಮಾಂಡ್‌ ಕೂಡ ಕಾರ್ಯನಿರ್ವಹಿಸಲಿದೆ.

ವೈಸ್‌ ಏರ್‌ಚೀಫ್‌ ಮಾರ್ಷಲ್‌ ಎಚ್‌.ಎಸ್‌. ಅರೋರಾ ಸಮಿತಿಯು ಇಂಥದ್ದೊಂದು ಕಮಾಂಡ್‌ ರಚನೆಗೆ ಶಿಫಾರಸು ಮಾಡಿತ್ತು. ಇದನ್ನು ಒಪ್ಪಿದ್ದ ರಕ್ಷಣಾ ಸಚಿವಾಲಯ ಕಮಾಂಡ್‌ ರಚನೆಯ ಹೊಣೆಯನ್ನು ಸೇನಾಪಡೆಗಳ ಮಹಾದಂಡನಾಯಕ ಬಿಪಿನ್‌ ರಾವತ್‌ ಅವರಿಗೆ ವಹಿಸಿತ್ತು. ಅದರಂತೆ ಸೇನೆಯ ಮೂರು ವಿಭಾಗಗಳಲ್ಲಿನ ಸಂಪನ್ಮೂಲ ಕ್ರೋಢೀಕರಿಸಿಕೊಂಡು, ಯಾವುದೇ ಹೊಸ ಹುದ್ದೆ ಸೃಷ್ಟಿಸದೇ ಇರುವ ಅಧಿಕಾರಿಗಳನ್ನೇ ಬಳಸಿಕೊಂಡು ಏರ್‌ ಡಿಫೆನ್ಸ್‌ ಕಮಾಂಡ್‌ ಸೃಷ್ಟಿಸಲಾಗುತ್ತಿದೆ. ಇದಕ್ಕೆಂದೇ ಈಗಾಗಲೇ ಇಸ್ರೇಲ್‌ ಮತ್ತು ರಷ್ಯಾದಿಂದ ತಲಾ ಒಂದೊಂದು ಫಾಲ್ಕನ್‌ ಏರ್‌ಬರ್ನ್‌ ಅರ್ಲಿ ವಾರ್ನಿಂಗ್‌ ಆ್ಯಂಡ್‌ ಕಂಟ್ರೋಲ್‌ ಸಿಸ್ಟಮ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಪ್ರಸ್ತಾಪವು ಶೀಘ್ರವೇ ಭದ್ರತೆ ಕುರಿತಾದ ಸಂಪುಟ ಸಮಿತಿಯಿಂದ ಅನುಮೋದನೆ ಪಡೆಯಲಿದೆ ಎನ್ನಲಾಗಿದೆ.

40 ಯೋಧರ ಬಲಿ ಪಡೆದ ಪುಲ್ವಾಮಾ ದಾಳಿಗೆ ಖರ್ಚಾಗಿದ್ದು ಐದೇ ಲಕ್ಷ..!

ಕಾರವಾರದಲ್ಲಿ ನೌಕಾ ಕಮಾಂಡ್‌ ಸ್ಥಾಪನೆ?

ಪ್ರಯಾಗ್‌ರಾಜ್‌ನಲ್ಲಿ ಏರ್‌ ಡಿಫೆನ್ಸ್‌ ಕಮಾಂಡ್‌ ಸ್ಥಾಪಿಸಿದಂತೆ ದಕ್ಷಿಣ ಭಾರತದ ಕಾರವಾರ ಅಥವಾ ಕೊಚ್ಚಿಯಲ್ಲಿ ನೌಕಾ ಕಮಾಂಡ್‌ ಸ್ಥಾಪಿಸುವ ಉದ್ದೇಶವನ್ನೂ ಸರ್ಕಾರ ಹೊಂದಿದೆ. ಈ ವಿಷಯದಲ್ಲೂ ಸಿಡಿಎಸ್‌ ಬಿಪಿನ್‌ ರಾವತ್‌ ಅವರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ

ಏಕೆ ಸ್ಥಾಪನೆ: ಶತ್ರು ದೇಶಗಳ ವಿಮಾನ, ಕ್ಷಿಪಣಿ, ಹೆಲಿಕಾಪ್ಟರ್‌ ಹಾಗೂ ಡ್ರೋನ್‌ಗಳ ದಾಳಿಯಿಂದ ಭಾರತವನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಏರ್‌ ಡಿಫೆನ್ಸ್‌ ಕಮಾಂಡ್‌ ಹೊಂದಿರಲಿದೆ. ಭೂಸೇನೆ, ನೌಕಾಪಡೆ ಹಾಗೂ ವಾಯುಪಡೆಯಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ಇದು ಒಳಗೊಂಡಿರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರತೀಯ ಮಾರ್ಕೆಟ್‌ಗೆ Gen Z ಜನಾಂಗ ಎಷ್ಟು ದೊಡ್ಡ ಆಸ್ತಿ? ಅವರು ಶಾಪಿಂಗ್‌ ಮಾಡೋದು ಹೇಗೆ ಗೊತ್ತಾ?
ಸಾಲ ಕಟ್ಟಲಾಗದಿದ್ದರೆ ಫೋನ್ ಲಾಕ್ ಆಗುತ್ತಾ? ಆರ್‌ಬಿಐನ ಕಟ್ಟುನಿಟ್ಟಿನ ನಿಯಮಗಳ ಮಾಹಿತಿ ಇಲ್ಲಿದೆ