ಪ್ಲಾಸ್ಟಿಕ್ ಮುಕ್ತ ಭಾರತ: ರೈಲು ನಿಲ್ದಾಣಗಳಲ್ಲಿನ್ನು ಮಣ್ಣಿನ ಕಪ್‌ನಲ್ಲಿ ಚಹಾ!

Published : Nov 30, 2020, 04:34 PM IST
ಪ್ಲಾಸ್ಟಿಕ್ ಮುಕ್ತ ಭಾರತ: ರೈಲು ನಿಲ್ದಾಣಗಳಲ್ಲಿನ್ನು ಮಣ್ಣಿನ ಕಪ್‌ನಲ್ಲಿ ಚಹಾ!

ಸಾರಾಂಶ

ರೈಲು ನಿಲ್ದಾಣಗಳಲ್ಲಿನ್ನು ಮಣ್ಣಿನ ಕಪ್‌ನಲ್ಲಿ ಚಹಾ| ಪ್ಲಾಸ್ಟಿಕ್‌ ಮುಕ್ತ ಭಾರತ ನಿರ್ಮಾಣಕ್ಕೆ ರೈಲ್ವೆ ಪಣ

ಜೈಪುರ(ನ.30): ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಮಣ್ಣಿನ ಕಪ್‌ಗಳಲ್ಲಿ ಚಹಾ-ಕಾಫಿ ವಿತರಣೆಗೆ ಕ್ರಮ ಜರುಗಿಸಲಾಗುವುದು ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿದ್ದಾರೆ.

ಭಾನುವಾರ ರಾಜಸ್ಥಾನದ ಅಳ್ವರ್‌ ಜಿಲ್ಲೆಯ ದಿಗ್ವಾಡಾ ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ಲಾಸ್ಟಿಕ್‌ ಮುಕ್ತ ಭಾರತ ಮಾಡುವ ಸರ್ಕಾರದ ಆಶಯಕ್ಕೆ ಅನುಗುಣವಾಗಿ ರೈಲ್ವೆ ಕೆಲಸ ಮಾಡುತ್ತಿದೆ. ಈಗಾಗಲೇ 400 ರೈಲು ನಿಲ್ದಾಣಗಳಲ್ಲಿ ಮಣ್ಣಿನ ಕಪ್‌ನಲ್ಲಿ ಚಹಾ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲ ನಿಲ್ದಾಣಗಳಲ್ಲಿ ಮಣ್ಣಿನ ಕಪ್‌ನಲ್ಲೇ ಚಹಾ ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ’ ಎಂದರು.

‘ನಾನು ಈ ಸಮಾರಂಭಕ್ಕೂ ಮುನ್ನ ಮಣ್ಣಿನ ಕಪ್‌ನಲ್ಲೇ ಚಹಾ ಕುಡಿದೆ. ಅದರ ರುಚಿಯೇ ವಿಭಿನ್ನವಾಗಿತ್ತು’ ಎಂದು ಹರ್ಷ ವ್ಯಕ್ತಪಡಿಸಿದರು.

‘ಮಣ್ಣಿನ ಕಪ್‌ನಲ್ಲಿ ಚಹಾ ಸೇವಿಸುವುದರಿಂದ ಪ್ಲಾಸ್ಟಿಕ್‌ ಬಳಕೆ ತಗ್ಗುತ್ತದೆ ಹಾಗೂ ಪರಿಸರ ರಕ್ಷಣೆ ಸಾಧ್ಯವಾಗುತ್ತದೆ. ಮಣ್ಣಿನ ಕಪ್‌ ತಯಾರಿಸುವ ಲಕ್ಷಾಂತರ ಕುಂಬಾರರಿಗೂ ಉದ್ಯೋಗ ದೊರಕುತ್ತದೆ’ ಎಂದು ಗೋಯಲ್‌ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!