ಟರ್ಕಿ, ಅಜರ್‌ಬೈಜಾನ್‌ ಜತೆ ವ್ಯಾಪಾರ ಬಂದ್‌: ವ್ಯಾಪಾರಿಗಳ ಒಕ್ಕೂಟ ನಿರ್ಣಯ

Published : May 17, 2025, 05:30 AM IST
ಟರ್ಕಿ, ಅಜರ್‌ಬೈಜಾನ್‌ ಜತೆ ವ್ಯಾಪಾರ ಬಂದ್‌: ವ್ಯಾಪಾರಿಗಳ ಒಕ್ಕೂಟ ನಿರ್ಣಯ

ಸಾರಾಂಶ

ಭಾರತ-ಪಾಕ್ ಸಂಘರ್ಷದ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿದ ಟರ್ಕಿ ವಿರುದ್ಧ ಬಾಯ್ಕಾಟ್ ಅಭಿಯಾನದ ಭಾಗವಾಗಿ ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್‌ಬೈಜಾನ್‌ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ನವದೆಹಲಿ: ಭಾರತ-ಪಾಕ್ ಸಂಘರ್ಷದ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿದ ಟರ್ಕಿ ವಿರುದ್ಧ ಬಾಯ್ಕಾಟ್ ಅಭಿಯಾನದ ಭಾಗವಾಗಿ ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್‌ಬೈಜಾನ್‌ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

24 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದ, ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಆಯೋಜಿಸಿದ್ದ ವ್ಯಾಪಾರಸ್ಥರ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಜತೆ ಎಲ್ಲರೂ ಒಗ್ಗಟ್ಟಿನಿಂದ ನಿಲ್ಲುವುದು ಹಾಗೂ ಭಾರತವಿರೋಧಿಗಳನ್ನು ದೃಢವಾಗಿ ವಿರೋಧಿಸುವ ನಿರ್ಣಯವನ್ನು ಸಿಎಐಟಿ ಅಂಗೀಕರಿಸಿದೆ. 

ಟರ್ಕಿ ಅಥವಾ ಅಜರ್‌ಬೈಜಾನ್‌ನಲ್ಲಿ ಯಾವುದೇ ಚಿತ್ರದ ಚಿತ್ರೀಕರಣ ನಡೆಸದಂತೆ ಭಾರತೀಯ ಚಲನಚಿತ್ರೋದ್ಯಮಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಸಿಎಐಟಿ ಮನವಿ ಮಾಡಿದ್ದು, ಈಗಾಗಲೇ ಯಾವುದೇ ಚಿತ್ರೀಕರಣ ನಡೆದಿದ್ದರೆ, ಅಂತಹ ಚಿತ್ರಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದೆ. ಈಗಾಗಲೇ ವ್ಯಾಪಾರಸ್ಥರು ಟರ್ಕಿ ಸೇಬುವನ್ನು ಬಾಯ್ಕಾಟ್ ಮಾಡಿದ್ದಾರೆ.

ಇದನ್ನೂ ಓದಿ: ಚೀನಾ-ಪಾಕ್‌ ವಾಯು ರಕ್ಷಣಾ ವ್ಯವಸ್ಥೆ ಬ್ರಹ್ಮೋಸ್‌ಗೆ ಸರಿಸಾಟಿಯಲ್ಲ: ತಜ್ಞರು

ವಿವಿಧ ಸಂಘಟನೆಗಳಿಂದ ಬಾಯ್ಕಾಟ್ ಕರೆ:
ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಜಿಯೋಹಾಟ್‌ಸ್ಟಾರ್ ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳು ಟರ್ಕಿ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (ಎಫ್‌ಡಬ್ಲುಐಸಿಇ) ಒತ್ತಾಯಿಸಿದೆ. ಇನ್ನೊಂದೆಡೆ ಎರಡೂ ದೇಶಗಳ ಜೊತೆಗಿನ ಎಲ್ಲಾ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸುವಂತೆ ಉದ್ಯಮಿಗಳಿಗೆ ಅಖಿಲ ಭಾರತ ರತ್ನ ಮತ್ತು ಆಭರಣ ದೇಶೀಯ ಮಂಡಳಿ (ಜಿಜೆಸಿ) ಒತ್ತಾಯಿಸಿದೆ. ಇನ್ನು, ಉತ್ತರ ಪ್ರದೇಶದ ಛತ್ರಪತಿ ಶಾಹುಜಿ ಮಹಾರಾಜ್ ವಿವಿ ಹಾಗೂ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿವಿಗಳು ಟರ್ಕಿ ವಿವಿಗಳ ಜತೆಗಿನ ತಿಳಿವಳಿಕೆ ಒಪ್ಪಂದವನ್ನು (ಎಂಒಯು) ತಕ್ಷಣವೇ ರದ್ದುಗೊಳಿಸುವುದಾಗಿ ಘೋಷಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!