ನಮಾಜ್‌ ಮುಗಿಸಿ ದಾಳಿ ಮಾಡ್ಬೇಕು ಅನ್ನುವಷ್ಟರಲ್ಲಿ ಭಾರತವೇ ಹೊಡೀತು: ಶೆಹಬಾಜ್‌ ಹೇಳಿದ್ದೇನು?

Kannadaprabha News   | Kannada Prabha
Published : May 30, 2025, 05:03 AM ISTUpdated : May 30, 2025, 05:29 AM IST
Pakistan Prime Minister Shehbaz Sharif (File photo/ Reuters)

ಸಾರಾಂಶ

‘ನಾವು ಮೇ 10ರಂದು ಬೆಳಗಿನ ಪ್ರಾರ್ಥನೆ (ನಮಾಜ್‌) ಮುಗಿಸಿ ಭಾರತದ ಮೇಲೆ ದಾಳಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಭಾರತ ಅದಕ್ಕೂ ಮೊದಲೇ ನಮ್ಮ ಮೇಲೆ ಬ್ರಹ್ಮೋಸ್‌ ಕ್ಷಿಪಣಿ ಹಾರಿಸಿ ವಾಯುನೆಲೆಗಳನ್ನು ಧ್ವಂಸ ಮಾಡಿತು’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ.

ನವದೆಹಲಿ (ಮೇ.30): ‘ನಾವು ಮೇ 10ರಂದು ಬೆಳಗಿನ ಪ್ರಾರ್ಥನೆ (ನಮಾಜ್‌) ಮುಗಿಸಿ ಭಾರತದ ಮೇಲೆ ದಾಳಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಭಾರತ ಅದಕ್ಕೂ ಮೊದಲೇ ನಮ್ಮ ಮೇಲೆ ಬ್ರಹ್ಮೋಸ್‌ ಕ್ಷಿಪಣಿ ಹಾರಿಸಿ ವಾಯುನೆಲೆಗಳನ್ನು ಧ್ವಂಸ ಮಾಡಿತು’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸೇನೆ ಭಾರತದ ದಾಳಿಯನ್ನು ಎದುರಿಸುವಲ್ಲಿ ವೈಫಲ್ಯ ಕಂಡಿತ್ತು ಎಂದು ಒಪ್ಪಿಕೊಂಡಿದ್ದಾರೆ.

ತನ್ನ ಮಿತ್ರ ದೇಶ ಅಜರ್‌ಬೈಜಾನ್‌ನಲ್ಲಿ ಕಾಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳಿದ್ದ ಷರೀಫ್ ಅಲ್ಲಿ ಮಾತನಾಡಿ, ‘ಭಾರತದ ದಾಳಿಗೆ (ಆಪರೇಷನ್‌ ಸಿಂದೂರ) ಸೂಕ್ತ ತಿರುಗೇಟು ನೀಡಲು ನಾವು ನಿರ್ಧರಿಸಿದ್ದೆವು. ಅದರಂತೆ ಮೇ 10ರಂದು ಬೆಳಗಿನ ಪ್ರಾರ್ಥನೆ ಮುಗಿಸಿ ಮುಂಜಾನೆ 4.30ರ ವೇಳೆಗೆ ಯೋಜಿತ ದಾಳಿ ನಡೆಸಿ ಶತ್ರು ದೇಶಕ್ಕೆ ಪಾಠ ಕಲಿಸಲು ಸಜ್ಜಾಗಿದ್ದೆವು.

ಆದರೆ ಅದಕ್ಕೆ ಒಂದು ಗಂಟೆ ಮುಂಚೆಯೇ ಭಾರತವು ನಮ್ಮ ದೇಶದ ಹಲವು ಪ್ರದೇಶಗಳ ಮೇಲೆ ದಾಳಿ ನಡೆಸಿತು. ಅವರು ಬ್ರಹ್ಮೋಸ್‌ ಕ್ಷಿಪಣಿ ಬಳಸಿ ರಾವಲ್ಪಿಂಡಿ ಸೇರಿದಂತೆ ನಮ್ಮ ಹಲವು ಪ್ರದೇಶಗಳ ಮೇಲೆ ದಾಳಿ ನಡೆಸಿದರು. ಈ ಬಗ್ಗೆ ಅಸೀಂ ಮುನೀರ್‌ ನನಗೆ ತಿಳಿಸಿದರು’ ಎಂದು ಹೇಳಿದ್ದಾರೆ. ಅವರು ಹೀಗೆ ಹೇಳುವಾಗ, ಇತ್ತೀಚೆಗಷ್ಟೇ ಫೀಲ್ಡ್‌ ಮಾರ್ಷಲ್‌ ಆಗಿ ಬಡ್ತಿ ಪಡೆದಿರುವ ಮುನೀರ್‌ ಕೂಡ ಉಪಸ್ಥಿತರಿದ್ದರು. ಮೇ 9-10ರಂದು ಭಾರತ ನಡೆಸಿದ ಕ್ಷಿಪಣಿ ದಾಳಿಗೆ ಪಾಕ್‌ನ ರಕ್ಷಣಾ ಸಚಿವಾಲಯದ ಮುಖ್ಯಕಚೇರಿ ಇರುವ ರಾವಲ್ಪಿಂಡಿ ಸೇರಿದಂತೆ 11 ವಾಯುನೆಲೆಗಳು ಧ್ವಂಸವಾಗಿದ್ದವು.

ಶೆಹಬಾಜ್‌ ಹೇಳಿದ್ದೇನು?
-ಭಾರತದ ದಾಳಿ (ಆಪರೇಷನ್‌ ಸಿಂದೂರ) ಗೆ ಸೂಕ್ತ ತಿರುಗೇಟು ನೀಡಲು ನಿರ್ಧಾರ ಮಾಡಿದ್ದೆವು
-ಮೇ 10ರಂದು ಬೆಳಗ್ಗೆ ನಮಾಜ್‌ ಮುಗಿಸಿ ನಸುಕಿನ 4.30ಕ್ಕೆ ದಾಳಿ ಮಾಡಲು ಪ್ಲಾನ್‌ ರೂಪಿಸಿದ್ದೆವು
-ಆದರೆ ಅದಕ್ಕೆ ಒಂದು ಗಂಟೆ ಮೊದಲೇ ಭಾರತ ನಮ್ಮ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿತು
-‘ಬ್ರಹ್ಮೋಸ್‌’ ಕ್ಷಿಪಣಿ ಬಳಸಿ ರಾವಲ್ಪಿಂಡಿ ಸೇರಿ ಹಲವು ಸ್ಥಳಗಳ ಮೇಲೆ ಭಾರತ ದಾಳಿ ನಡೆಸಿತು
-ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ಅವರು ನನಗೆ ಈ ವಿಷಯವನ್ನು ತಿಳಿಸಿದರು
- ಮಿತ್ರ ದೇಶ ಅಜರ್‌ಬೈಜಾನ್‌ನಲ್ಲಿ ಮುನೀರ್‌ ಸಮ್ಮುಖವೇ ವೈಫಲ್ಯ ಒಪ್ಪಿಕೊಂಡ ಶೆಹಬಾಜ್‌ ಷರೀಫ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು