
ರಾಮೇಶ್ವರಂ: ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
ಈ ಹಿಂದೆ 1914ರಲ್ಲಿ ನಿರ್ಮಿತ ರೈಲ್ವೆ ಸೇತುವೆಯ ಮೂಲಕ ರಾಮೇಶ್ವರಂಗೆ ರೈಲು ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಆ ಸೇತುವೆ ಶಿಥಿಲಗೊಂಡ ಕಾರಣ 2022ರಲ್ಲಿ ರೈಲು ಸಂಪರ್ಕ ಕಡಿತಗೊಳಿಸಲಾಗಿತ್ತು. ಅದರ ಸಮೀಪದಲ್ಲೇ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆದು ಇದೀಗ ಪೂರ್ಣಗೊಂಡಿದೆ. ಈಗಾಗಲೇ ಈ 2 ಕಿ.ಮೀ. ಉದ್ದದ ಸೇತುವೆಯಲ್ಲಿ ರೈಲುಗಳ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಅಂದು ರೈಲು ಸಂಚಾರಕ್ಕೂ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಸೇತವೆ ವೈಶಿಷ್ಟ್ಯ:
ಇದು ಭಾರತದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಆಗಲಿದೆ. ಸಮುದ್ರಮಾರ್ಗದಲ್ಲಿ ಹಡಗುಗಳ ಸಂಚಾರ ವೇಳೆ ಸೇತುವೆಯು ಮೇಲಕ್ಕೆತ್ತಲ್ಪಟ್ಟು, ಬಳಿಕ ಅದು ಸ್ವಸ್ಥಾನಕ್ಕೆ ಮರಳಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡುವ ವ್ಯವಸ್ಥೆ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ