Indira Gandhi birth anniversary: ಫ್ರೀ ಬಸ್‌ ಆಯ್ತು, ಈಗ ತೆಲಂಗಾಣದಲ್ಲಿ 1 ಕೋಟಿ ಫ್ರೀ ಸೀರೆ!

Kannadaprabha News, Ravi Janekal |   | Kannada Prabha
Published : Nov 20, 2025, 06:52 AM IST
telangana CM Launch one crore saree distributed

ಸಾರಾಂಶ

ತೆಲಂಗಾಣ ಸರ್ಕಾರವು 'ಇಂದಿರಮ್ಮ ಸೀರೆ ವಿತರಣೆ ಯೋಜನೆ'ಯನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಉದ್ಘಾಟಿಸಿದಎರಡು ಹಂತಗಳಲ್ಲಿ ರಾಜ್ಯದ ಸುಮಾರು 1 ಕೋಟಿ ಅರ್ಹ ಮಹಿಳೆಯರಿಗೆ ಉಚಿತವಾಗಿ ಸೀರೆ ವಿತರಣೆ ಈ ಯೋಜನೆಯು ಇಂದಿರಾ ಗಾಂಧಿಯವರಿಂದ ಪ್ರೇರಿತವಾದ ಮಹಿಳಾ ಸಬಲೀಕರಣದ ಒಂದು ಭಾಗವಾಗಿದೆ.

ಹೈದರಾಬಾದ್‌ (ನ.20): ಈಗಾಗಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಮಾಸಿಕ ಹಣ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದ ತೆಲಂಗಾಣ ಸರ್ಕಾರ ಈಗ ಉಚಿತ ಸೀರೆ ಯೋಜನೆ ಜಾರಿಗೆ ತಂದಿದೆ.

ಇಂದಿರಮ್ಮ ಸೀರೆ ವಿತರಣೆ ಯೋಜನೆ:

ಭಾರತದ ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು 1 ಕೋಟಿ ಮಹಿಳೆಯರಿಗೆ ಸೇರೆ ಹಂಚುವ ‘ಇಂದಿರಮ್ಮ ಸೀರೆ ವಿತರಣೆ ಯೋಜನೆ’ಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಬುಧವಾರ ಉದ್ಘಾಟಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ, ‘ಸೀರೆ ವಿತರಣೆ ಯೋಜನೆ 2 ಹಂತದಲ್ಲಿ ಈ ಯೋಜನೆ ಜಾರಿಯಾಗಲಿದೆ. ಮೊದಲು ಡಿ.9ರ ಒಳಗೆ ಗ್ರಾಮೀಣ ಭಾಗದ ಅರ್ಹ ಮಹಿಳೆಯರಿಗೆ ಸೀರೆ ನೀಡಲಾಗುವುದು. ಬಳಿಕ ಮಾ.1-8ರ ಹೊತ್ತಿಗೆ ನಗರಪ್ರದೇಶದಲ್ಲಿ 65 ಲಕ್ಷ ಸೀರೆಗಳ ವಿತರಣೆಯಾಗುವುದು ಎಂದರು.

ಮಹಿಳಾ ಸಬಲೀಕರಣ ಕಾರ್ಯಕ್ರಮಕ್ಕೆ ಇಂದಿರಾ ಗಾಂದಿ ಪ್ರೇರಣೆ:

ಇಂದಿರಾ ಅವರಿಂದ ಪ್ರೇರಿತರಾಗಿ ನಮ್ಮ ಸರ್ಕಾರ ಹಲವು ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ರೆಡ್ಡಿ ಹೇಳಿದರು. ಇದೇ ವೇಳೆ, ಆ ಸೀರೆ ಉಟ್ಟು ಮಹಿಳಾ ಸ್ವಾಭಿಮಾನವನ್ನು ಪ್ರದರ್ಶಿಸುವಂತೆ ಸಚಿವೆಯರು ಮತ್ತು ಶಾಸಕಿಯರಿಗೆ ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ
19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ