
ನವದೆಹಲಿ (ಸೆ.22): ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ) ಯೋಜನೆಯಡಿ ಬರುವ ತುಮಕೂರು ಔದ್ಯೋಗಿಕ ವಲಯದ ಅಭಿವೃದ್ಧಿಗೆ ಶೀಘ್ರದಲ್ಲೇ ಕೇಂದ್ರ ವಾಣಿಜ್ಯ ಸಚಿವಾಲಯವು ಸಚಿವ ಸಂಪುಟದ ಅನುಮೋದನೆ ಕೋರಲಿದೆ.
1,736 ಎಕರೆ ಪ್ರದೇಶದಲ್ಲಿ ತಲೆಯೆತ್ತಲಿರುವ ಈ ಕೈಗಾರಿಕಾ ವಲಯಕ್ಕೆ ಈಗಾಗಲೇ ರಾಷ್ಟ್ರೀಯ ಔದ್ಯೋಗಿಕ ಕಾರಿಡಾರ್ಗಳ ಅಭಿವೃದ್ಧಿ ಮತ್ತು ಜಾರಿ ಟ್ರಸ್ಟ್ (ಎನ್ಐಸಿಡಿಐಟಿ) ಅನುಮೋದನೆ ನೀಡಿದೆ. ಶೀಘ್ರದಲ್ಲೇ ಇದರ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ವಾಣಿಜ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಮಕ್ಕಳಿಗೆ ಮನಿ ಮ್ಯಾನೇಜ್ಮೆಂಟ್: ವಾರನ್ ಬಫೆಟ್ ಹೇಳೋದೇನು? ...
ತುಮಕೂರಿನ ಜೊತೆಗೆ ಉತ್ತರ ಪ್ರದೇಶದ ಮಲ್ಟಿ-ಮೋಡಲ್ ಲಾಜಿಸ್ಟಿಕ್ ಹಬ್ ಮತ್ತು ಆಂಧ್ರಪ್ರದೇಶದ ಔದ್ಯೋಗಿಕ ವಲಯಕ್ಕೂ ಅನುಮೋದನೆ ಕೋರಲಾಗುತ್ತದೆ. ಸದ್ಯ ದೇಶದಲ್ಲಿ 11 ಔದ್ಯೋಗಿಕ ಕಾರಿಡಾರ್ಗಳ ನಿರ್ಮಾಣ ಯೋಜನೆ ವಿವಿಧ ಹಂತದಲ್ಲಿದ್ದು, ಅದರಲ್ಲಿ ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ), ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ (ಬಿಎಂಐಸಿ) ಹಾಗೂ ಹೈದರಾಬಾದ್-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಎಚ್ಬಿಐಸಿ) ಕೂಡ ಸೇರಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ