
ರಾಯ್ಪುರ: ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ ಅವನಿಗೆ ಉಸಿರಾಡಲು ಕಷ್ಟವಾಗಿದ್ದು ಅತ ಸಾವನ್ನಪ್ಪಿದ್ದಾನೆ. ಛತ್ತೀಸ್ಗಢದ ಅಂಬಿಕಾಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಛತ್ತೀಸ್ಗಢದ ಸರ್ಗುಜಾ ಜಿಲ್ಲೆಯ ದರಿಮಾ ಪೊಲೀಸ್ ಠಾಣಾ ವ್ಯಾಪ್ತಿಯ ಚಿಂದ್ಕಾಲೋ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂತ್ರವಾದಿ ಕೊಟ್ಟ ಕೋಳಿ ಮರಿಯನ್ನು ವ್ಯಕ್ತಿಯೊರ್ವ ಜೀವಂತವಾಗಿ ನುಂಗಿದ್ದು ಅದು ಕತ್ತಿನಲ್ಲಿ ಸಿಲುಕಿ ಆತ ಸಾವನ್ನಪ್ಪಿದ್ದಾನೆ. ಉಸಿರಾಡಲು ಕಷ್ಟಪಡುತ್ತಿದ್ದ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ಇನ್ನು ವಿಚಿತ್ರ ಎಂದರೆ ಅಸ್ವಸ್ಥಗೊಂಡಿದ್ದ ಈತನನ್ನು ಆಸ್ಪತ್ರೆಗೆ ಕರೆದೊಯ್ದ ಕುಟುಂಬದವರು ಆತ ಬಿದ್ದು ಅಸ್ವಸ್ಥಗೊಂಡಿದ್ದಾನೆ ಎಂದಿದ್ದರು. ಆದರೆ ತಪಾಸಣೆ ಮಾಡಿದ ವೈದ್ಯರು ಆತ ಕೋಳಿ ಮರಿಯನ್ನು ಜೀವಂತವಾಗಿ ನುಂಗಲು ಯತ್ನಿಸಿದ್ದರಿಂದ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ನೀಡಿದ್ದಾರೆ. ಅಲ್ಲದೇ ವೈದ್ಯರು ಆತನ ಗಂಟಲಿನಲ್ಲಿ ಸಿಲುಕಿದ್ದ ಕೋಳಿ ಮರಿಯನ್ನು ಹೊರತೆಗೆದಿದ್ದಾರೆ.
ಘಟನೆ ಬಗ್ಗೆ ದರಿಮಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತಿದ್ದಾರೆ. ವಿಚಾರಣೆ ವೇಳೆ ವ್ಯಕ್ತಿಗೆ ಮಕ್ಕಳಿಲ್ಲದ ಕಾರಣ ಆತ ಚಿಂತಿತನಾಗಿದ್ದ ಎಂದು ಕುಟುಂಬದವರು ಹೇಳಿದ್ದಾರೆ. , ಹೀಗೆ ಆತ ಮಂತ್ರವಾದಿಯ ಬಳಿ ಹೋದಾಗ ಮಂತ್ರವಾದಿ ಆತನಿಗೆ ಕೋಳಿ ಮರಿಯನ್ನು ಜೀವಂತವಾಗಿ ತಿನ್ನುವ ಸಲಹೆ ನೀಡಿದ್ದು, ಆತ ಶಾಶ್ವತವಾಗಿ ಬಾರದ ಲೋಕಕ್ಕೆ ತೆರಳಿದ್ದಾನೆ. ಇನ್ನು ಕುಟುಂಬದವರು ಮಾತ್ರ ಮನೆಯ ಸಮೀಪ ಬಾವಿಯೊಂದಿದ್ದು, ಅಲ್ಲಿ ಸ್ನಾನ ಮಾಡಲು ಹೋಗಿದ್ದ ಆತ ವಾಪಸ್ ಬರುವಾಗ ಇದಕ್ಕಿದ್ದಂತೆ ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಆತ ಅಲ್ಲಿ ಸಾವನ್ನಪ್ಪಿದ ಎಂದು ಮಾಹಿತಿ ನೀಡಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪದ ಕುಟುಂಬ
ಇತ್ತ ಮೃತ ವ್ಯಕ್ತಿಯಸಂಬಂಧಿಕರು ವ್ಯಕ್ತಿಯ ಮರಣೋತ್ತರ ಪರೀಕ್ಷೆಗೂ ಒಪ್ಪಿರಲಿಲ್ಲ, ಆದರೆ ಅಂಬಿಕಾಪುರ ಜಿಲ್ಲಾ ಆಸ್ಪತ್ರೆಯ ವೈದ್ಯರು ಈತನ ಸಾವಿನ ಬಗ್ಗೆ ಅನುಮಾನಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಕುಟುಂಬದವರು ಮರಣೋತ್ತರ ಪರೀಕ್ಷೆಗೆ ಒಪ್ಪಿದ್ದಾರೆ. ಈ ವೇಳೆ ವೈದ್ಯರಿಗೆ ವ್ಯಕ್ತಿಯ ಗಂಟಲಿನಲ್ಲಿ ಜೀವಂತ ಕೋಳಿಮರಿ ಇರುವುದು ಕಂಡು ಬಂದಿದ್ದು, ವೈದ್ಯರೇ ಬೆಚ್ಚಿ ಬಿದ್ದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ