ಟ್ರಾಕ್ಟರ್‌ನಲ್ಲಿ ಬಂದು ಹರ್ಯಾಣದ INLD ಶಾಸಕ ರಾಜೀನಾಮೆ!

Published : Jan 28, 2021, 01:40 PM ISTUpdated : Jan 28, 2021, 03:34 PM IST
ಟ್ರಾಕ್ಟರ್‌ನಲ್ಲಿ ಬಂದು ಹರ್ಯಾಣದ INLD ಶಾಸಕ ರಾಜೀನಾಮೆ!

ಸಾರಾಂಶ

ಭಾರತ ರಾಷ್ಟ್ರೀಯ ಲೋಕ ದಳ (ಐಎನ್‌ಎಲ್‌ಡಿ) ಪಕ್ಷದ ನಾಯಕ ಅಭಯ್‌ ಸಿಂಗ್‌ ಚೌತಲಾ ರಾಜೀನಾಮೆ|  ಟ್ರಾಕ್ಟರ್‌ನಲ್ಲಿ ಬಂದು ಹರ್ಯಾಣ ಶಾಸಕ ರಾಜೀನಾಮೆ!

ಚಂಡೀಗಢ(ಜ.28): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಾರ‍ಯಣದ ಭಾರತ ರಾಷ್ಟ್ರೀಯ ಲೋಕ ದಳ (ಐಎನ್‌ಎಲ್‌ಡಿ) ಪಕ್ಷದ ನಾಯಕ ಅಭಯ್‌ ಸಿಂಗ್‌ ಚೌತಲಾ ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಹಸಿರು ಟ್ರ್ಯಾಕ್ಟರ್‌ ಏರಿ ವಿಧಾನಸಭಾ ಆವರಣಕ್ಕೆ ಬಂದ ಚೌತಲಾ ಅವರು, ಕಳೆದ ಕೆಲವು ತಿಂಗಳುಗಳಿಂದ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವ ರೈತರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿ, ರಾಜೀನಾಮೆ ಸಲ್ಲಿಸಿದರು.

ಚೌತಲಾ ಅವರು 90 ಮಂದಿ ಶಾಸಕರಿರುವ ಹರಾರ‍ಯಣ ವಿಧಾನಸಭೆಯಲ್ಲಿ ಐಎನ್‌ಎಲ್‌ಡಿ ಪಕ್ಷದಿಂದ ನೇಮಕವಾಗಿರುವ ಏಕೈಕ ಶಾಸಕರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India news live: ಸೌದಿ ಅರೇಬಿಯಾಗೆ ಪಾಕಿಸ್ತಾನದಿಂದ 13,000 ಸೈನಿಕರು, 18 ಜೆಟ್ ರವಾನೆ
Jagannath Temple: ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರ: ಹೊರಗಿನ ಖಜಾನೆ ಲೆಕ್ಕ ಮುಗೀತು, ಈಗ ಒಳಗಿನ ಸರದಿ!