ದಾಳಿ ಉಗ್ರರಿಗಿಂತ ಬೌದ್ಧಿಕ ಉಗ್ರರು ಹೆಚ್ಚು ಅಪಾಯಕಾರಿ : ದಿಲ್ಲಿ ಪೊಲೀಸ್

Kannadaprabha News   | Kannada Prabha
Published : Nov 21, 2025, 05:00 AM IST
Delhi Police

ಸಾರಾಂಶ

ಬುದ್ಧಿಜೀವಿಗಳು ಭಯೋತ್ಪಾದಕರಾದಾಗ, ಅವರು ನೇರವಾಗಿ ಉಗ್ರ ಚಟುವಟಿಕೆ ನಡೆಸುವವರಿಗಿಂತ ಹೆಚ್ಚು ಅಪಾಯಕಾರಿಯಾಗುತ್ತಾರೆ ಎಂದು ದೆಹಲಿ ಪೊಲೀಸರು ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಬುದ್ಧಿಜೀವಿಗಳು ಭಯೋತ್ಪಾದಕರಾದಾಗ, ಅವರು ನೇರವಾಗಿ ಉಗ್ರ ಚಟುವಟಿಕೆ ನಡೆಸುವವರಿಗಿಂತ ಹೆಚ್ಚು ಅಪಾಯಕಾರಿಯಾಗುತ್ತಾರೆ ಎಂದು ದೆಹಲಿ ಪೊಲೀಸರು ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ಅಭಿಪ್ರಾಯಪಟ್ಟಿದ್ದಾರೆ.

2020ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ವಿರೋಧಿಸಿ ಹಿಂಸಾಚಾರ

2020ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ವಿರೋಧಿಸಿ ಹಿಂಸಾಚಾರ ನಡೆಸಿದ ಆರೋಪ ಹೊತ್ತಿರುವ ಉಮರ್‌ ಖಲೀದ್‌, ಶಾರ್ಜೀಲ್‌ ಇಮಾಮ್‌ ಮೊದಲಾದವರ ಜಾಮೀನು ಅರ್ಜಿ ವಿಚಾರಣೆ ವೇಳೆ, ದೆಹಲಿ ಪೊಲೀಸರ ಪರವಾಗಿ ಸಾಲಿಸಿಟರ್‌ ಜನರಲ್‌ ಎಸ್‌.ವಿ. ರಾಜು ವಾದ ಮಂಡಿಸಿದರು.

ವೃತ್ತಿಯ ಬದಲು ದೇಶವಿರೋಧಿ ಚಟುವಟಿಕೆ

‘ಹಿಂಸಾಚಾರ ಆರೋಪಿ ಇಮಾಮ್‌ ಇಂಜಿನಿಯರ್‌ ಆಗಿದ್ದವನು. ಇತ್ತೀಚೆಗೆ ವೈದ್ಯರು, ಇಂಜಿನಿಯರ್‌ಗಳು ತಮ್ಮ ವೃತ್ತಿಯ ಬದಲು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಟ್ರೆಂಡ್‌ ಆರಂಭವಾಗಿದೆ. ಇದು ಸರಳವಾದ ಪ್ರತಿಭಟನೆಯಾಗಿರಲಿಲ್ಲ. ಆಡಳಿತ ಬದಲಾವಣೆ ಅವರ ಅಂತಿಮ ಉದ್ದೇಶವಾಗಿತ್ತು. ಹಾಗಾಗಿ ಅವರಿಗೆ ಜಾಮೀನು ನೀಡಬಾರದು. ತಥಾಕಥಿಕ ಬುದ್ಧಿಜೀವಿಗಳು ನೇರ ಉಗ್ರಕೃತ್ಯ ನಡೆಸುವವರಿಗಿಂತ ಬಹಳ ಅಪಾಯಕಾರಿ’ ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ