ಕೋವಿಡ್‌ ಶುರುವಾದ ಮೇಲೆ ರಾಜನಾಥ್‌ ಸಿಂಗ್‌ ಫುಲ್‌ ಶೈನಿಂಗ್‌; ಕಾರಣ ಇಂಟರೆಸ್ಟಿಂಗ್..!

Published : Jun 26, 2020, 05:26 PM IST
ಕೋವಿಡ್‌ ಶುರುವಾದ ಮೇಲೆ ರಾಜನಾಥ್‌ ಸಿಂಗ್‌ ಫುಲ್‌ ಶೈನಿಂಗ್‌; ಕಾರಣ ಇಂಟರೆಸ್ಟಿಂಗ್..!

ಸಾರಾಂಶ

ಮೋದಿ ಸರ್ಕಾರಕ್ಕೆ ಕೋವಿಡ್‌-19 ಕಾಟ ಶುರುವಾದ ಮೇಲೆ ಏಕಾಏಕಿ ರಾಜನಾಥ್‌ ಸಿಂಗ್‌ ಸರ್ಕಾರದ ಮುಖವಾಗಿ ಕಾಣಿಸಿಕೊಳ್ಳತೊಡಗಿದ್ದಾರೆ. ಕೋವಿಡ್‌ ನಿಯಂತ್ರಣದ ಸಚಿವರ ಸಮಿತಿಯ ಜವಾಬ್ದಾರಿಯನ್ನು ಅಮಿತ್‌ ಶಾಗೆ ಬಿಟ್ಟು, ಇನ್ನಿತರ ವ್ಯವಹಾರಗಳ ಹೊಣೆಯನ್ನು ರಾಜನಾಥ್‌ ಸಿಂಗ್‌ ಅವರಿಗೆ ಕೊಟ್ಟಮೋದಿ ಈಗ ಚೀನಾ ಘರ್ಷಣೆ, ನೇಪಾಳ ಕಿರಿಕಿರಿ ಬಗ್ಗೆ ಕೂಡ ರಾಜನಾಥ್‌ ಸಿಂಗ್‌ರಿಂದಲೇ ಹೇಳಿಕೆ ಕೊಡಿಸುತ್ತಿದ್ದಾರೆ.

ನವದೆಹಲಿ (ಜೂ. 26): ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿದ್ದರೂ ರಾಜನಾಥ್‌ ಸಿಂಗ್‌ ಅವರಿಗೆ ಹೆಚ್ಚಿನ ಮಹತ್ವವೇನೂ ಇರಲಿಲ್ಲ. ಆಗ ಸರ್ಕಾರದ ವಿಷಯಗಳಲ್ಲಿ ಅರುಣ್‌ ಜೇಟ್ಲಿ ಅವರು ಮೋದಿಗೆ ಆಪದ್ಬಾಂಧವರಾಗಿದ್ದರೆ, ಪಕ್ಷ ಮತ್ತು ರಾಜಕೀಯ ವಿಷಯದಲ್ಲಿ ಅಮಿತ್‌ ಶಾ ಮೇಲೆ ಮೋದಿ ಅವಲಂಬಿತರಾಗಿದ್ದರು.

ಹೆಚ್ಚುತ್ತಿದೆ ಇಂಡೋ- ಅಮೆರಿಕನ್ ಬಾಂಧವ್ಯ; ಚೀನಾಗೆ ಕಂಗಾಲು

ಆದರೆ ಮೋದಿ ಸರ್ಕಾರಕ್ಕೆ ಕೋವಿಡ್‌-19 ಕಾಟ ಶುರುವಾದ ಮೇಲೆ ಏಕಾಏಕಿ ರಾಜನಾಥ್‌ ಸಿಂಗ್‌ ಸರ್ಕಾರದ ಮುಖವಾಗಿ ಕಾಣಿಸಿಕೊಳ್ಳತೊಡಗಿದ್ದಾರೆ. ಕೋವಿಡ್‌ ನಿಯಂತ್ರಣದ ಸಚಿವರ ಸಮಿತಿಯ ಜವಾಬ್ದಾರಿಯನ್ನು ಅಮಿತ್‌ ಶಾಗೆ ಬಿಟ್ಟು, ಇನ್ನಿತರ ವ್ಯವಹಾರಗಳ ಹೊಣೆಯನ್ನು ರಾಜನಾಥ್‌ ಸಿಂಗ್‌ ಅವರಿಗೆ ಕೊಟ್ಟಮೋದಿ ಈಗ ಚೀನಾ ಘರ್ಷಣೆ, ನೇಪಾಳ ಕಿರಿಕಿರಿ ಬಗ್ಗೆ ಕೂಡ ರಾಜನಾಥ್‌ ಸಿಂಗ್‌ರಿಂದಲೇ ಹೇಳಿಕೆ ಕೊಡಿಸುತ್ತಿದ್ದಾರೆ. ರಾಜಕಾರಣದಲ್ಲಿ ಕೆಲವೊಮ್ಮೆ ಹೆಚ್ಚೆಚ್ಚು ಮಹತ್ವ ಪಡೆದವರು ಹರಕೆಯ ಕುರಿ ಆಗುವುದೂ ಉಂಟು!

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ