
ಅಯೋಧ್ಯೆ(ಆ.03): ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಇನ್ನು ಎರಡೇ ದಿನಗಳು ಉಳಿದಿವೆ. ಹೀಗಿರುವಾಗ ಕೇಸರಿ ಬಣ್ಣದ ಆಮಂತ್ರಣ ಪತ್ರಿಕೆಯೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೊರತುಪಡಿಸಿ ಇನ್ನು ಕೇವಲ ಮೂರು ಮಂದಿಯ ಹೆಸರು ಶಾಮೀಲಾಗಿದೆ. ಇದು ಅತಿಥಿಗಳ ಪಟ್ಟಿಯನ್ನು ಕಡಿತಗೊಳಿಸಿರುವ ಸಂಕೇತವಾಗಿದೆ.
ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ!
ಆಹ್ವಾನ ಪತ್ರಿಕೆಯನ್ವಯ ಮೋದಿ ಹೊರತುಪಡಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಗವರ್ನರ್ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರು ಹಾಕಲಾಗಿದೆ. ಕೊರೋನಾತಂಕದ ನಡುವೆ ನಡೆಯುತ್ತಿರುವ ಈ ಭವ್ಯ ಮಂದಿರದ ಭೂಮಿ ಪೂಜೆಗೆ ಸೀಮಿತ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ.
ರಾಮ ಮಂದಿರ ನಿರ್ಮಾಣ: ಇಟ್ಟಿಗೆ ಹೊತ್ತು 2066 ಕಿ.ಮೀ. ಪ್ರಯಾಣಿಸಿದ್ದ ಹೂಡಿ ಮಂಜುನಾಥ್ ಹರ್ಷ
ಆಹ್ವಾನ ಪತ್ರಿಕೆಯಲ್ಲಿ ಈ ಹೆಸರುಗಳನ್ನು ಹೊರತುಪಡಿಸಿ ಶ್ರೀರಾಮನ ಚಿತ್ರವೂ ಒಂದಿದೆ. ಲಭ್ಯವಾದ ಮಾಹಿತಿ ಅನ್ವಯ ಕೇವಲ 150 ಮಂದಿಗಷ್ಟೇ ಆಮಂತ್ರಣ ನೀಡಲಾಗಿದೆ. ಅಲ್ಲದೇ ಸಭಾ ಕಾರ್ಯಕ್ರಮದಲ್ಲೂ ವೇದಿಕೆ ಮೇಲೆ ಕೇಲ ಐದು ಮಂದಿಗೆ ಕುಳಿತುಕೊಳ್ಳುವ ಸಿದ್ಧತೆ ಮಾಡಲಾಗಿದೆ. ಇದರಲ್ಲಿ ಪಿಎಂ ಮೋದಿ, ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಮಹಂತ್ ನೃತ್ಯ ಗೋಪಾಲದಾಸ್ ಕೂಡಾ ಇರಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ