ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಪ್ರವೀಣ್‌ ಮಧುಕರ್‌ ನೇಮಕ

Published : Nov 05, 2023, 09:40 AM ISTUpdated : Nov 05, 2023, 09:48 AM IST
ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಪ್ರವೀಣ್‌ ಮಧುಕರ್‌ ನೇಮಕ

ಸಾರಾಂಶ

ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಪ್ರವೀಣ್‌ ಮಧುಕರ್‌ ನೇಮಕ. ಸಿಬಿಐನಲ್ಲಿ ಕರ್ನಾಟಕದ ಮೂವರು ಅಧಿಕಾರಿಗಳು ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಣೆ

ನವದೆಹಲಿ (ನ.5): ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಐಪಿಎಸ್‌ ಪ್ರವೀಣ್ ಮಧುಕರ್‌ ಪವಾರ್‌ ನೇಮಕಗೊಂಡಿದ್ದಾರೆ. ಐದು ವರ್ಷಗಳ ಅವಧಿಗೆ ಜಂಟಿ ನಿರ್ದೇಶಕರಾಗಿ ನೇಮಕವಾಗಿರುವ ಪ್ರವೀಣ್‌, 2003ರಿಂದ ಐಪಿಎಸ್‌ ಅಧಿಕಾರಿಯಾಗಿ ಕರ್ನಾಟಕದಲ್ಲಿ ವಿವಿಧೆಡೆ ಸೇವೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಕೇಡರ್‌ನ ಪಿ. ಕೃಷ್ಣಕಾಂತ್‌ ಸಿಬಿಐ ಎಸ್‌ಪಿ ಆಗಿ ನೇಮಕಗೊಂಡಿದ್ದರು. ಇನ್ನು ಕರ್ನಾಟಕದ ಡಿಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಹಾಲಿ ಸಿಬಿಐನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಿವಾದದ ಬೆನ್ನಲ್ಲೇ ಆತ್ಮಚರಿತ್ರೆ ಹಿಂಪಡೆದ ಇಸ್ರೋ ಚೇರ್ಮೆನ್ ಎಸ್ ಸೋಮನಾಥ್!

ಪ್ರಸ್ತುತ ಸಿಬಿಐ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಮೇ 25 ರಂದು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೂದ್ ಅವರು ಅಧಿಕಾರ ವಹಿಸಿಕೊಂಡರು.

ಬೀದರ್‌: ಯನಗುಂದಾ ಗ್ರಾಮದಲ್ಲಿ ಹಸಿ ಗಾಂಜಾ ಜಪ್ತಿ, ಇಬ್ಬರ ಬಂಧನ 

ನಿಯಮಗಳ ಪ್ರಕಾರ, ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ನೇಮಕಾತಿಯ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?