ದೀಪಾವಳಿಗೆ ಊರಿಗೆ ತೆರಳುತ್ತಿದ್ದೀರಾ? ರೈಲ್ವೇ ಟಿಕೆಟ್ ಬುಕ್ ಮಾಡಲು ಸಾಧ್ಯವಾಗದೇ ಪರದಾಟ

Published : Oct 17, 2025, 03:47 PM IST
Indian railways

ಸಾರಾಂಶ

ದೀಪಾವಳಿಗೆ ಊರಿಗೆ ತೆರಳುತ್ತಿದ್ದೀರಾ? ರೈಲ್ವೇ ಟಿಕೆಟ್ ಬುಕ್ ಮಾಡಲು ಸಾಧ್ಯವಾಗದೇ ಪರದಾಟ, ಭಾರತೀಯ ರೈಲ್ವೇ ವೆಬ್‌ಸೈಟ್ ಹಾಗೂ ಆ್ಯಪ್ ಡೌನ್ ಆಗಿದೆ. ಟಿಕೆಟ್ ಸಿಗದೆ ಜನರು ಕಂಗಾಲಾಗಿದ್ದಾರೆ. ಈಗ ಟಿಕೆಟ್ ಪಡೆಯುವುದು ಹೇಗೆ?

ನವದೆಹಲಿ (ಅ.17) ದೀಪಾವಳಿ ಹಬ್ಬ ಕುಟುಂಬದ ಜೊತೆ ಆಚರಿಸಲು ಹಲವರು ತಮ್ಮ ತಮ್ಮ ಊರಿಗೆ ತೆರಳುತ್ತಿದ್ದಾರೆ. ಪ್ರತಿ ಬಾರಿ ಹಬ್ಬದ ಸಂದರ್ಭದಲ್ಲಿ ರೈಲ್ವೇ, ಬಸ್ ಸೇರಿದಂತೆ ಎಲ್ಲಾ ಸಾರಿಗೆ ವಾಹನಗಳು ತುಂಬಿ ತುಳುಕುತ್ತದೆ. ಈ ಬಾರಿ ವೀಕೆಂಡ್‌ನಿಂದಲೇ ಹಬ್ಬದ ಸಂಭ್ರಮ ಆರಂಭಗೊಂಡಿರುವ ಕಾರಣ ಊರಿಗೆ ತೆರಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇಂದು ಭಾರತೀಯ ರೈಲ್ವೇ ಮೂಲಕ ಪ್ರಯಾಣಕ್ಕೆ ಮುಂದಾದ ಪ್ರಯಾಣಿಕರಿಗೆ ಹಿನ್ನಡೆಯಾಗಿದೆ. ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲು ಟಿಕೆಟ್ ಬುಕಿಂಗ್ ಮಾಡಲು ಮುಂದಾಗಿರುವ ಕಾರಣ ಭಾರತೀಯ ರೈಲ್ವೇ ವೆಬ್‌ಸೈಟ್ ಹಾಗೂ ಆ್ಯಪ್ ಸರ್ವರ್ ಡೌನ್ ಆಗಿ ಸಮಸ್ಯೆಯಾಗಿದೆ. ಹೀಗಾಗಿ ಟಿಕೆಟ್ ಬುಕಿಂಗ್ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ.

ತತ್ಕಾಲ್ ಮೂಲಕ ಟಿಕೆಟ್ ಮಾಡಲು ಹೊರಟ ಪ್ರಯಾಣಿಕರಿಗೆ ಶಾಕ್

ಅಂತಿಮ ಕ್ಷಣದಲ್ಲಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಲು ಪ್ಲಾನ್ ಮಾಡಿದ ಪ್ರಯಾಣಿಕರಿಗೆ ಹಿನ್ನಡೆಯಾಗಿದೆ. ತತ್ಕಾಲ್ ಮೂಲಕ ರೈಲ್ವೇ ಟಿಕೆಟ್ ಬುಕಿಂಗ್ ಮಾಡಲು ಸಾಧ್ಯವಾಗಿಲ್ಲ. ಸರ್ವರ್ ಡೌನ್ ಆಗಿರುವ ಕಾರಣ IRCTC ವೆಬ್‌ಸೈಟ್ ಹಾಗೂ ಆ್ಯಪ್ ಎರಡೂ ಕೂಡ ಡೌನ್ ಆಗಿದೆ. ಟಿಕೆಟ್ ಸಿಗದೆ ರೈಲ್ವೇ ನಿಲ್ದಾಣಗಳಲ್ಲಿ ಟಿಕೆಟ್ ಪಡೆಯಲು ಭಾರಿ ಜನಸಂದಣಿ ಸೃಷ್ಟಿಾಯಾಗಿದೆ.

ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ರೈಲ್ವೇ ಟಿಕೆಟ್ ಬುಕಿಂಗ್ ಮಾಡಲು ಸಾಧ್ಯವಾಗದೇ ಪ್ರಯಾಣಿಕರು ಪರದಾಡುತ್ತಿದ್ದಂತೆ ಭಾರತೀಯ ರೈಲ್ವೇ ಈ ಕುರಿತು ಸ್ಪಷ್ಟನೆ ನೀಡಿದೆ. ತಾಂತ್ರಿಕ ಸಮಸ್ಯೆಯಿಂದ ಸಮಸ್ಯೆ ಎದುರಾಗಿದೆ. ಕೆಲವೇ ಗಂಟೆಗಳಲ್ಲಿ ಪ್ರಯಾಣಿಕರು ಯಾವುದೇ ಅಡಚಣೆ ಇಲ್ಲದೆ ಟಿಕೆಟ್ ಬುಕಿಂಗ್ ಮಾಡುಲ ಸಾಧ್ಯವಾಗಲಿದೆ. ತಾಂತ್ರಿಕ ಸಿಬ್ಬಂದಿ ವರ್ಗ ಈ ಸಮಸ್ಯೆಯನ್ನು ಬಗೆಹರಿಸುತ್ತಿದೆ. ರೈಲ್ವೇ ನಿಲ್ದಾಣಗಳ ಕೇಂದ್ರಗಳಲ್ಲಿ ಟಿಕೆಟ್ ಬುಕಿಂಗ್ ಮಾಡಿ ಸಹಕರಿಸಬೇಕಾಗಿ ಕೋರಿದೆ.

ಬೆಂಗಳೂರಿನಿಂದ ವಿಶೇಷ ರೈಲು

ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಲು ಬೆಂಗಳೂರಿನಿಂದ ಹಲವು ವಿಶೇಷ ರೈಲು ಬಿಡಲಾಗಿದೆ. ಮಂಗಳೂರು, ಹುಬ್ಬಳ್ಳಿ, ಗೋವಾ, ಕೊಲ್ಲಂ ಸೇರಿದಂತೆ ಹಲವು ಮಾರ್ಗಗಳಲ್ಲಿ ರೈಲು ಸಂಚಾರ ನಡೆಯುತ್ತಿದೆ. ದೀಪಾವಳಿ ವಿಶೇಷ ರೈಲು ಹಲವು ಭಾಗಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಈ ಮೂಲಕ ಜನದಟ್ಟಣೆ ಕಡಿಮೆ ಮಾಡಲು, ಜನರಿಗೆ ಅನುಕೂಲವಾಗುವಂತೆ ಹೆಚ್ಚುವರಿ ರೈಲು ನೀಡಲಾಗಿದೆ. ದೀಪಾವಳಿ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲನ್ನೇ ಅವಲಂಬಿಸುವ ಕಾರಣ ಹಬ್ಬದ ವಿಶೇಷವಾಗಿ 7,000 ಹೆಚ್ಚುವರಿ ರೈಲು ಬಿಡಲಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿ ದಿನ 2 ಲಕ್ಷ ಹೆಚ್ಚುವರಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..