ದೇಗುಲದಲ್ಲಿ ಇದೆಂಥಾ ಅವಾಂತರ: ಪುಳಿಯೊಗರೆ ಪ್ರಸಾದದಲ್ಲಿ ಸತ್ತ ಇಲಿ ಪತ್ತೆ!

Published : Mar 18, 2024, 02:19 PM IST
ದೇಗುಲದಲ್ಲಿ ಇದೆಂಥಾ ಅವಾಂತರ: ಪುಳಿಯೊಗರೆ ಪ್ರಸಾದದಲ್ಲಿ ಸತ್ತ ಇಲಿ ಪತ್ತೆ!

ಸಾರಾಂಶ

 ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. 

ಹೈದರಾಬಾದ್: ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ತೆಲಂಗಾಣದ ಯಾದಾದ್ರಿಯಲ್ಲಿ ಭಕ್ತರಿಗೆ ನೀಡಿದ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದೆ.  ಆದರೆ ದೇಗುಲ ಸಮಿತಿ ಈ ಆರೋಪವನ್ನು ನಿರಾಕರಿಸಿದ್ದು, ವೀಡಿಯೋದ ಸತ್ಯಾಸತ್ಯತೆಯನ್ನು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಯಾರೋ ತೆಲಂಗಾಣದ ಪ್ರಸಿದ್ಧ ತೀರ್ಥಕ್ಷೇತ್ರ ಯಾದಾದ್ರಿ ದೇಗುಲದಲ್ಲಿ ಪ್ರಸಾದವಾಗಿ ನೀಡಿದ ಪುಳಿಯೊಗರೆಯಲ್ಲಿ ಇಲಿ ಇತ್ತು ಎಂದು ಬರೆದು  ವೀಡಿಯೋವೊಂದನ್ನು ಪೊಸ್ಟ್ ಮಾಡಿದ್ದಾರೆ ಎನ್ನಲಾಗಿದೆ.  

ತನಗೆ ಕಡಿದ ಇಲಿಯನ್ನ ಹಿಡಿದು ಕಚ್ಚಿ ಸಾಯಿಸಿದ ಯುವತಿ ಆಸ್ಪತ್ರೆಗೆ!

ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆಯ ಕಮೀಷನರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಘಟನೆಯನ್ನು ಖಂಡಿಸುವುದಾಗಿ ಹೇಳಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ನಾವು ವಿಚಾರಣೆ ನಡೆಸಿದ್ದು, ಈ ವೀಡಿಯೋದಲ್ಲಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವಿಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೇಗುಲದ ಆಡಳಿತ ಮಂಡಳಿಯನ್ನು ಸಂಪರ್ಕಿಸಿದ್ದೇವೆ. ಅಲ್ಲಿ ಯಾವುದೇ ಭಕ್ತರು ದೂರು ನೀಡಿಲ್ಲ,  ದೇಗುಲದ ಸುತ್ತಮುತ್ತಲ ವಾತಾವರಣವೂ ಸ್ವಚ್ಛತೆಯಿಂದ ಕೂಡಿದೆ, ಜೊತೆಗೆ ಪ್ರಸಾದವನ್ನು ತಯಾರು ಮಾಡುವ ಪ್ರದೇಶವೂ ಸ್ವಚ್ಛತೆಯಿಂದ ಇದ್ದು ಬಹಳ ಶುದ್ಧತೆಯಿಂದ ಮಾಡಿದ್ದಾರೆ. ಕೆಲವು ದುರುದ್ದೇಶ ಪೂರಿತ ಜನರು ಉದ್ದೇಶಪೂರ್ವಕವಾಗಿ ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಈ ವೀಡಿಯೋ  ಬಗ್ಗೆ ದೇಗುಲ ಆಡಳಿತ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆ ಶವಾಗಾರದಲ್ಲಿ ಇಲಿಗಳ ದಾಳಿಯಿಂದ ವಿರೂಪಗೊಂಡ ಸರ್ಕಾರಿ ಅಧಿಕಾರಿ ಮೃತದೇಹ: ಕುಟುಂಬಸ್ಥರ ಆಕ್ರೋಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಜೆ ಮುಗಿಸಿ ವಾಪಾಸ್‌ ಬಂದ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್‌, ಸರ್ಕಾರಿ ಗರ್ಲ್ಸ್‌ ಹಾಸ್ಟೆಲ್‌ನ ಹೊಸ ನಿಯಮಕ್ಕೆ ಆಕ್ರೋಶ
ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ