
ನವದೆಹಲಿ: ಭಾರತದ ವಿವಿಧ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರು.ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಂಚಕ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರವೇ ಭಾರತಕ್ಕೆ ಗಡೀಪಾರಾಗುವ ಸಾಧ್ಯತೆ ಕಂಡುಬಂದಿದೆ.
ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ಇಬ್ಬರೂ ಆರೋಪಿಗಳು, ಭಾರತದ ಜೈಲುಗಳಲ್ಲಿನ ಅವ್ಯವಸ್ಥೆಯನ್ನೇ ಪ್ರಮುಖವಾಗಿ ಉಲ್ಲೇಖಿಸಿದ್ದರು. ಅಲ್ಲಿಗೆ ಹೋದರೆ ತಾವು ಕಾಯಿಲೆ ಬಿದ್ದು ಸಾಯುವ ಗಂಭೀರ ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ಬ್ರಿಟನ್ನ ಜೈಲು ಅಧಿಕಾರಿಗಳ ತಂಡವೊಂದು ಇತ್ತೀಚೆಗೆ ದೆಹಲಿಯ ತಿಹಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ವಿಜಯ್ ಮಲ್ಯ ಗಡೀಪಾರಿಗೆ ಸಂಬಂಧಿಸಿದಂತೆ ಭಾರತದ ಜೈಲಿನ ಸ್ಥಿತಿ ಬಗ್ಗೆ ಬ್ರಿಟನ್ ನ್ಯಾಯಾಲಯ ಕಳವಳ ವ್ಯಕ್ತಪಡಿಸಿತ್ತು. ಆಗ ಭಾರತವು ಜೈಲಿನ ಸ್ಥಿತಿ ಉನ್ನತೀಕರಿಸಲಾಗುತ್ತದೆ ಎಂದು ಭರವಸೆ ನೀಡಿತ್ತು. ಮತ್ತೊಂದೆಡೆ ಗಡೀಪಾರು ಜಾರಿಯಾಗಿದ್ದರೂ ಸಹ ನೀರವ್ ಮೋದಿಯನ್ನು ಬ್ರಿಟನ್ನ ಜೈಲಿನಲ್ಲಿಯೇ ಇರಿಸಿಕೊಂಡಿದೆ. ಇದರ ಬೆನ್ನಲ್ಲೇ ಬ್ರಿಟನ್ನ ಕ್ರೌನ್ ಪ್ರಾಸಿಕ್ಯೂಷನ್ ಸರ್ವೀಸ್ನ ಅಧಿಕಾರಿಗಳು ತಿಹಾರ್ಗೆ ಭೇಟಿ ನೀಡಿ ಅಲ್ಲಿನ ಕೈದಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಜೈಲಿನ ಸ್ಥಿತಿಗತಿಯ ಕುರಿತು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಹುಬೇಡಿಕೆ ವಂಚಕರಿಗೆ ಬೇಕಿದ್ದರೆ ‘ವಿಶೇಷ ವ್ಯವಸ್ಥೆ’ ಮಾಡುವುದಾಗಿ ಭಾರತದ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13800 ಕೋಟಿ ರು. ವಂಚಿಸಿ ಮತ್ತು ವಿಜಯ್ ಮಲ್ಯ ಎಸ್ಬಿಐ ಸೇರಿದಂತೆ ವಿವಿಧ ಬ್ಯಾಂಕ್ಗಳಿಗೆ 9000 ಕೋಟಿ ರು. ವಂಚಿಸಿ ಪರಾರಿಯಾದ ಆರೋಪ ಎದುರಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ