
ನವದೆಹಲಿ(ಫೆ.19): ಇದೇ ಫೆ.24ರಿಂದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಟ್ರಂಪ್ ಸ್ವಾಗತಕ್ಕೆ ಭರದ ಸಿದ್ಧತೆ ನಡೆದಿದೆ. ಆದರೆ ಇದೇಕೊ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಸರಿ ಕಂಡುಬರುತ್ತಿಲ್ಲ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಭಾರತ ಭೇಟಿಗೆ ಅಪಸ್ವರ ಎತ್ತಿರುವ ಅಧೀರ್ ರಂಜನ್ ಚೌಧರಿ, ಟ್ರಂಪ್ ಸ್ವಾಗತದ ತಯಾರಿಗಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.
ಭಾರತ ಚೆನ್ನಾಗಿ ನೋಡಿಕೊಂಡಿಲ್ಲ: ಬರವುದಕ್ಕೂ ಮೊದಲೇ ಇದೇನು ಹೇಳಿಬಿಟ್ರಿ ಟ್ರಂಪ್?
ಅಹಮದಾಬಾದ್ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ 70 ಲಕ್ಷ ಜನ ಟ್ರಂಪ್ ಅವರನ್ನು ಸ್ವಾಗತಿಸಲು ಅವರೇನು ದೇವರೇ ಎಂದು ಅಧೀರ್ ರಂಜನ್ ಚೌಧರಿ ಪ್ರಶ್ನಿಸಿದ್ದಾರೆ.
ಟ್ರಂಪ್ ಸ್ವಹಿತಾಸಕ್ತಿಗಾಗಿ ಭಾರತಕ್ಕೆ ಬರುತ್ತಿದ್ದು, ಅವರಿಗೇಕೆ ಇಷ್ಟು ಅದ್ದೂರಿ ಸ್ವಾಗತ ಎಂದು ಅಧೀರ್ ರಂಜನ್ ಚೌಧರಿ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
3 ಗಂಟೆ ಇರಲಿರುವ ಟ್ರಂಪ್ಗಾಗಿ 100 ಕೋಟಿ ರೂ. ಖರ್ಚು ಮಾಡಿದ ಸರ್ಕಾರ!
ಟ್ರಂಪ್ ಭೇಟಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಸಿದ್ದತೆಗೆ ಶಿವಸೇನೆ ಕೂಡ ಕಿಡಿಕಾರಿದೆ. ಸರ್ಕಾರ ಮಾಡುತ್ತಿರುವ ಸಿದ್ದತೆ ನೋಡಿದರೆ ಭಾರತೀಯರ ಗುಲಾಮ ಮನೋವೃತ್ತಿಯನ್ನು ತೋರಿಸುತ್ತದೆ ಎಂದು ಶಿವಸೇನೆ ಹರಿಹಾಯ್ದಿದೆ.
ಫೆಬ್ರವರಿ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ