
ಬಸ್ತಿ[ಜ.06]: ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಗಳ ಪೈಕಿ ಒಂದಾಗಿರುವ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಸಂಘಟನೆಯ ಇಬ್ಬರು ಶಂಕಿತ ಉಗ್ರರು ಉತ್ತರಪ್ರದೇಶವನ್ನು ಪ್ರವೇಶಿಸಿದ್ದಾರೆ, ಅವರು ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ- ನೇಪಾಳ ಗಡಿಯಲ್ಲಿರುವ ಉತ್ತರಪ್ರದೇಶದ ಜಿಲ್ಲೆಗಳಾದ ಮಹಾರಾಜಗಂಜ್, ಕುಶಿನಗರ ಹಾಗೂ ಸಿದ್ಧಾರ್ಥನಗರ ಜಿಲ್ಲೆಗಳಲ್ಲಿ ಹೈ ಅಲರ್ಟ್ ಸಾರಲಾಗಿದೆ.
ಪೊಲೀಸರಿಗೆ ಬೇಕಾಗಿರುವ ಇಬ್ಬರು ಭಯೋತ್ಪಾದಕರಾದ ಅಬ್ದುಲ್ ಸಮದ್ ಹಾಗೂ ಇಲಿಯಾಸ್ ಎಂಬುವರು ಉತ್ತರಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ತಿಳಿಸಿವೆ. ಈ ಇಬ್ಬರು ಭಾವಚಿತ್ರಗಳನ್ನು ಎಲ್ಲೆಡೆ ರವಾನಿಸಲಾಗಿದೆ ಎಂದು ಬಸ್ತಿ ವಲಯದ ಐಜಿ ಆಶುತೋಷ್ ಕುಮಾರ್ ಅವರು ತಿಳಿಸಿದ್ದಾರೆ. ಆದರೆ ಈ ಇಬ್ಬರು ಯಾವ ಉಗ್ರ ಸಂಘಟನೆಯವರು ಎಂಬುದು ತಮಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಆ ಇಬ್ಬರೂ ಐಸಿಸ್ ಸಂಘಟನೆಯವರಾಗಿದ್ದಾರೆ.
ಅಬ್ದುಲ್ ಸಮದ್ ಹಾಗೂ ಇಲಿಯಾಸ್ ಈ ಮುನ್ನ ಪಶ್ಚಿಮ ಬಂಗಾಳದ ಸಿಲಿಗುರಿ ಜಿಲ್ಲೆಯಲ್ಲಿ ಕಂಡುಬಂದಿದ್ದರು. ಐಸಿಸ್ ಜತೆ ನಿಕಟ ಸಂಬಂಧ ಹೊಂದಿದ್ದರು. ದೇಶದಲ್ಲಿ ಐಸಿಸ್ ವಿಸ್ತರಿಸಲು ಯತ್ನಿಸುತ್ತಿದ್ದರು. ಅವರಿಬ್ಬರ ಬಂಧನಕ್ಕೆ ಪೊಲೀಸರು ಭಾರಿ ಬಲೆ ಬೀಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಭಾರತ ಹಾಗೂ ನೇಪಾಳ ಗಡಿ 1751 ಕಿ.ಮೀ. ಉದ್ದವಿದೆ. ಉತ್ತರಪ್ರದೇಶವೊಂದೇ ನೇಪಾಳ ಜತೆ 599.3 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ