ಇಸ್ಲಾಂಗೆ ಯೂರೋಪ್ ನಲ್ಲಿ ಜಾಗವಿಲ್ಲ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Published : Dec 19, 2023, 08:04 AM IST
ಇಸ್ಲಾಂಗೆ ಯೂರೋಪ್ ನಲ್ಲಿ ಜಾಗವಿಲ್ಲ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಸಾರಾಂಶ

ಇಸ್ಲಾಮಿಕ್ ಸಂಸ್ಕೃತಿಗೂ ಮತ್ತು ಯೂರೋಪಿಯನ್ ನಾಗರೀಕತೆಗೂ ಹೊಂದಾಣಿಕೆಯ ಸಮಸ್ಯೆ ಇದ್ದು, ಇಸ್ಲಾಂಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.

ನವದೆಹಲಿ (ಡಿ.19): ಇಸ್ಲಾಮಿಕ್ ಸಂಸ್ಕೃತಿಗೂ ಮತ್ತು ಯೂರೋಪಿಯನ್ ನಾಗರೀಕತೆಗೂ ಹೊಂದಾಣಿಕೆಯ ಸಮಸ್ಯೆ ಇದ್ದು, ಇಸ್ಲಾಂಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.

ಬ್ರದರ್ಸ್ ಆಫ್ ಇಟಲಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, 'ಇಸ್ಲಾಮಿಕ್ ಸಂಸ್ಕೃತಿಯ ಕೆಲವು ವ್ಯಾಖ್ಯಾನಗಳು ಮತ್ತು ನಮ್ಮ ನಾಗರಿಕತೆಯ ಹಕ್ಕುಗಳು ಹಾಗೂ ಮೌಲ್ಯಗಳ ನಡುವೆ ಹೊಂದಾಣಿಕೆಯ ಸಮಸ್ಯೆ ಇದೆ. ಇಟಲಿಯಲ್ಲಿನ ಹೆಚ್ಚಿನ ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರಗಳು ಸೌದಿ ಅರೇಬಿಯಾದಿಂದ ಹಣಕಾಸು ಪಡೆಯುತ್ತವೆ ಎಂಬುದು ನನಗೆ ಗೊತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಕಾನೂನು ಎಂದು ಕರೆಯಲ್ಪಡುವ ಷರಿಯಾ ಕಾನೂನು, ಇಸ್ಲಾಂ ಧರ್ಮದ ಮೂಲಭೂತ ಧಾರ್ಮಿಕ ಪಠ್ಯಗಳಾದ ಕುರಾನ್ ಮತ್ತು ಹದೀಸ್‌ನಲ್ಲಿರುವ ನಿಬಂಧನೆಗಳ ಪ್ರಕಾರ ಶಿಕ್ಷೆಗಳನ್ನು ವಿಧಿಸತ್ತದೆ ಎಂದು ಹೇಳಿದರು.

ಮೆಲೋನಿ ಮೋದಿ ಸೆಲ್ಫಿಗೆ ಸೋನಿಯಾ ರಿಯಾಕ್ಷನ್ ಹೇಗಿರುತ್ತೆ: ಟ್ರೋಲರ್ಸ್‌ ಕಲ್ಪಿತ ಎಡಿಟೆಡ್ ವಿಡಿಯೋ ಸಖತ್ ವೈರಲ್

ಅಂತೆಯೇ ಧರ್ಮದ ಕುರಿತ ಟೀಕೆ ಹಾಗೂ ಸಲಿಂಗಕಾಮಗಳ ಕುರಿತು ಸೌದಿ ಅರೇಬಿಯಾದ ಕಠಿಣ ಷರಿಯಾ ಕಾನೂನನ್ನು ಟೀಕಿಸಿದ ಅವರು, “ಷರಿಯಾದ ಪ್ರಕಾರ ವಿವಾಹೇತರ ಸಂಬಂಧ, ಧರ್ಮಭ್ರಷ್ಟತೆ ಮತ್ತು ಸಲಿಂಗಕಾಮಕ್ಕೆ ಮರಣದಂಡನೆ ವಿಧಿಸಲಾಗುತ್ತದೆ. ಈ ವಿಚಾರವನ್ನು ಇಂದು ನಾವು ವಿಮರ್ಶಿಸಬೇಕು. ಅಂದರೆ ಇಸ್ಲಾಂ ಧರ್ಮವನ್ನು ಜನರಲೈಸ್‌ ಮಾಡುವುದು ಎಂದರ್ಥವಲ್ಲ. ಈ ಮೂಲಕ ಯುರೋಪ್‌ನ ನಾಗರಿಕತೆಯ ಮೌಲ್ಯಗಳಿಗೂ ಇಸ್ಲಾಮ್‌ನ ಮೌಲ್ಯಗಳಿಗೂ ಬಹುದೂರವಿದೆ ಎಂಬುದನ್ನು ನಾವು ತಿಳಿಯಬೇಕು” ಎಂದು ಅವರು ಹೇಳಿದರು.

ಇದೇ ವೇಳೆ ಮೆಲೋನಿ, ಮೆಡಿಟರೇನಿಯನ್ ಸಮುದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷನಾ ಹಡಗುಗಳ ಚಟುವಟಿಕೆಗಳನ್ನು ಕಡಿತಗೊಳಿಸುವ ಪ್ರಯತ್ನಗಳಿಗೆ ಟೀಕೆ ಎದುರಿಸಿದ್ದಾರೆ.

ಸ್ತ್ರೀಯರ ಬಗ್ಗೆ ಪತಿ ಚೆಲ್ಲು ಚೆಲ್ಲು ಮಾತು: ಸಂಗಾತಿಯಿಂದ ದೂರವಾದ ಇಟಲಿ ಪ್ರಧಾನಿ

“ನಾವು ಈ ಸಮಸ್ಯೆಯನ್ನು ನಿಭಾಯಿಸದಿದ್ದರೆ, ವಲಸೆ ಸಂಖ್ಯೆ ಬೆಳೆಯುತ್ತದೆ. ನಮ್ಮ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡುವ ನಮ್ಮ ಸಾಮರ್ಥ್ಯವನ್ನು ಇದು ಕುಂಠಿತಗೊಳಿಸುತ್ತದೆ. ಆ ಪ್ರತಿಬಂಧಕವನ್ನು ಮೀರುವುದು, ವಿಭಿನ್ನವಾಗಿ ಕೆಲಸ ಮಾಡುವುದು ಸಾಧ್ಯವಾಗಬೇಕು. ನಾನು ಮತ್ತು ಜಾರ್ಜಿಯಾ ಹಾಗೆ ಮಾಡಲು ಸಿದ್ಧರಿದ್ದೇವೆ” ಎಂದು ಸುನಕ್‌ ಹೇಳಿದ್ದಾರೆ. ಉಭಯ ನಾಯಕರೂ ಆಲ್ಬೇನಿಯನ್ ಪ್ರಧಾನಿ ಎಡಿ ರಾಮ ಅವರನ್ನು ಭೇಟಿಯಾಗಿ ವಲಸೆಯ ಬಗ್ಗೆ ಚರ್ಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ