ಇಸ್ರೇಲ್ ದಾಳಿಗೆ ನಡುಗಿದ ಹಿಜ್ಬುಲ್ಲಾ ಉಗ್ರರು;100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿ ದಾಳಿ!

Published : Aug 26, 2024, 04:46 AM IST
ಇಸ್ರೇಲ್ ದಾಳಿಗೆ ನಡುಗಿದ ಹಿಜ್ಬುಲ್ಲಾ ಉಗ್ರರು;100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿ ದಾಳಿ!

ಸಾರಾಂಶ

ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.

ಟೆಲ್‌ ಅವಿವ್‌/ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ. ಇದಕ್ಕೆ ಪ್ರತಿಯಾಗಿ ಹಿಜ್ಬುಲ್ಲಾ ಉಗ್ರರು ಕೂಡಾ 300ಕ್ಕೂ ಹೆಚ್ಚು ರಾಕೆಟ್‌ ಬಳಸಿ ಪ್ರತಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆಗಿರುವ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಇಸ್ರೇಲ್‌- ಹಮಾಸ್‌ ನಡುವೆ ಕದನ ವಿರಾಮ ಘೋಷಣೆಗೆ ಹಲವು ದೇಶಗಳು ಹಿಂಬಾಗಿಲ ಮಾತುಕತೆ ನಡೆಸುತ್ತಿರುವ ಹೊತ್ತಿನಲ್ಲೇ ನಡೆದ ಈ ಬೆಳವಣಿಗೆ ದೊಡ್ಡದೊಂದು ಯುದ್ಧಕ್ಕೆ ಮುನ್ನುಡಿ ಬರೆಯಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ ಎರಡೂ ಬಣಗಳು ತಮ್ಮ ದಾಳಿ ಮುಕ್ತಾಯವಾಗಿದೆ ಎಂದು ಘೋಷಿಸಿದ ಕಾರಣ ತಕ್ಷಣಕ್ಕೆ ಅಪಾಯ ದೂರವಾಗಿದೆ.

WATCH: ಹಿಜಾಬ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಹಾಡು ಹಾಡಿದ್ದಕ್ಕೆ ಬಂಧಿಸಿ ಜೈಲಿಗಟ್ಟಿದ ಇರಾನ್!

ಭಾರೀ ದಾಳಿ:

ಇರಾನ್‌ ಬೆಂಬಲಿತ ಹಿಜ್ಬುಲ್ಲಾ ಉಗ್ರರು ತನ್ನ ಮೇಲೆ ದಾಳಿ ನಡೆಸಬಹುದು ಎಂಬ ಸುಳಿವು ಪಡೆದ ಇಸ್ರೇಲಿ ಸೇನೆ, ಭಾನುವಾರ 100ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಬಳಸಿ ಲೆಬನಾನ್‌ನ ಉಗ್ರ ನೆಲೆಯ ಮೇಲೆ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿದೆ. ಇತ್ತೀಚೆಗೆ ಹಿಜ್ಬುಲ್ಲಾ ಕಮಾಂಡರ್‌ ಫೌದ್‌ ಶುಕ್ರ್‌ ಎಂಬಾತ ಇಸ್ರೇಲಿ ದಾಳಿಗೆ ಬಲಿಯಾಗಿದ್ದ. ಹೀಗಾಗಿ ಇದಕ್ಕೆ ಪ್ರತೀಕಾರ ತೆಗೆದುಕೊಳ್ಳಲು ಇಸ್ರೇಲ್‌ ಮೇಲೆ ದಾಳಿಗೆ ಉಗ್ರರು ಸಜ್ಜಾಗಿದ್ದರು. ಆದರೆ ಇದರ ಸುಳಿವು ಪಡೆದ ಇಸ್ರೇಲಿ ಮೊದಲು ತಾನೇ ದಾಳಿ ನಡೆಸಿ ಉಗ್ರರ ಮಟ್ಟಹಾಕುವ ಕೆಲಸ ಮಾಡಿದೆ.

ಆದರೆ ಈ ದಾಳಿಗೂ ಬಗ್ಗದ ಹಿಜ್ಬುಲ್ಲಾ ಉಗ್ರರು, 320 ಕತ್ಯೂಷಾ ರಾಕೆಟ್‌ ಅನ್ನು ಇಸ್ರೇಲಿ ಗಡಿಯೊಳಗೆ ಹಾರಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!