
ಬೆಂಗಳೂರು: ಪ್ರತಿಕೂಲ ಹವಾಮಾನ ಅಥವಾ ಇನ್ನಾವುದೇ ಆಪತ್ತಿನಿಂದಾಗಿ ಸಮುದ್ರದಲ್ಲಿ ಸಿಲುಕುವ ಮೀನುಗಾರರ ರಕ್ಷಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) 2ನೇ ತಲೆಮಾರಿನ 'ಡಿಸ್ಟ್ರೆಸ್ ಅಲರ್ಟ್ ಟ್ರಾನ್ಸ್ಮಿಟರ್' (ಡಾಟ್) ಎಂಬ ಉಪಕರಣ ಅಭಿವೃದ್ಧಿಪಡಿಸಿದೆ.
ಇದನ್ನು ಬಳಸಿ ಮೀನುಗಾರರು ಉಪಗ್ರಹದ ಮೂಲಕ ಸಮುದ್ರದಿಂದ ತುರ್ತು ಸಂದೇಶ ರವಾನಿಸಬಹುದು ಮತ್ತು ಅವರಿಗೆ ತಕ್ಷಣ ಪ್ರತಿಕ್ರಿಯೆ ಲಭಿಸುತ್ತದೆ. ಈಗಾಗಲೇ ಇರುವ ಡಾಟ್ ವ್ಯವಸ್ಥೆಯನ್ನು ಇಸ್ರೋ ಮೇಲ್ದರ್ಜೆಗೇರಿಸಿದೆ. ತಮ್ಮ ಮೊಬೈಲ್ನಲ್ಲೇ ಮೀನುಗಾರರು ಸೌಕರ್ಯವನ್ನು ಬಳಸಬಹುದು.
ಅವರು ಕಳುಹಿಸಿದ ಸಂದೇಶವು ಇಂಡಿಯನ್ ಮಿಷನ್ ಕಂಟ್ರೋಲ್ ಸೆಂಟರ್ ಬರುತ್ತದೆ. ಅಲ್ಲಿಂದ ಕರಾವಳಿ ರಕ್ಷಣಾ ಪಡೆಗೆ ಅದನ್ನು ರವಾನಿಸಲಾಗುತ್ತದೆ. ಅವರಿಗೆ ಮೀನುಗಾರರಿರುವ ಸ್ಥಳ ತಿಳಿಯುತ್ತದೆ. ತಕ್ಷಣ ಅವರು ರಕ್ಷಣೆಗೆ ಧಾವಿಸುತ್ತಾರೆ ಎಂದು ಇಸ್ರೋ ತಿಳಿಸಿದೆ. ಇದೇ ವ್ಯವಸ್ಥೆಯನ್ನು ಬಳಸಿ ಮೀನುಗಾರರು ಸುರಕ್ಷಿತ ಸ್ಥಳಕ್ಕೆ ತಾವೇ ತೆರಳುವ ಅಥವಾ ಮರಳಿ ತಮ್ಮ ಸ್ಥಳಕ್ಕೆ ಬರುವ ಅವಕಾಶವೂ ಇದೆ.
ಮಲ್ಪೆ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 8 ಮೀನುಗಾರರ ರಕ್ಷಣೆ
ಮೀನುಗಾರರ ಬಲೆ ಸೇರಿ, ತೀರಕ್ಕೆ ಬಂದ ಅಪರೂಪದ ಅತೀ ವಿಷಕಾರಿ ಸಮುದ್ರ ಹಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ