ತೆಲಂಗಾಣದಲ್ಲಿ ಜಗನ್‌ ಸೋದರಿಯಿಂದ ಹೊಸ ಪಕ್ಷ ಸ್ಥಾಪನೆ!

Published : Jul 09, 2021, 08:28 AM IST
ತೆಲಂಗಾಣದಲ್ಲಿ ಜಗನ್‌ ಸೋದರಿಯಿಂದ ಹೊಸ ಪಕ್ಷ ಸ್ಥಾಪನೆ!

ಸಾರಾಂಶ

* ‘ವೈಎಸ್‌ಆರ್‌ ತೆಲಂಗಾಣ’ ಪಕ್ಷಕ್ಕೆ ಶರ್ಮಿಳಾ ಚಾಲನೆ * ಜಗನ್‌ ಸೋದರಿಯಿಂದ ಹೊಸ ಪಕ್ಷ ಸ್ಥಾಪನೆ * ಆಂಧ್ರ ಬಿಟ್ಟು ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆ

ಹೈದರಾಬಾದ್‌(ಜು.09): ಆಂಧ್ರಪ್ರದೇಶ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ ಅವರ ಸೋದರಿ ವೈ.ಎಸ್‌ ಶರ್ಮಿಳಾ ಅವರು ಗುರುವಾರ ‘ವೈಎಸ್‌ಆರ್‌ ತೆಲಂಗಾಣ’ ಎಂಬ ಹೊಸ ಪಕ್ಷಕ್ಕೆ ಅಧಿಕೃತ ಚಾಲನೆ ನೀಡಿದರು.

ಇಲ್ಲಿನ ಖಾಸಗಿ ಹಾಲ್‌ವೊಂದರಲ್ಲಿ ಪಕ್ಷದ ಕಾರ‍್ಯಕರ್ತರ ಸಮ್ಮುಖದಲ್ಲಿ ತಮ್ಮ ಹೊಸ ಪಕ್ಷದ ಬಾವುಟ ಮತ್ತು ಧ್ಯೇಯೋದ್ಧೇಶಗಳನ್ನು ಪ್ರಚುರಪಡಿಸಿದ ಶರ್ಮಿಳಾ ಅವರು, ಪಕ್ಷ ಸ್ಥಾಪನೆಯಾದ 100ನೇ ದಿನಕ್ಕೆ ರಾಜ್ಯಾದ್ಯಂತ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದರು.

ತಮ್ಮ ತಂದೆ ಹಾಗೂ ಆಂಧ್ರದ ಮಾಜಿ ಮುಖ್ಯಮಂತ್ರಿ ರಾಜಶೇಖರ್‌ ರೆಡ್ಡಿ ಅವರ ಆಕಾಂಕ್ಷೆಯಂತೆ ರಾಜಣ್ಣ ರಾಜ್ಯಂ ಆಡಳಿತ ನೀಡುವುದೇ ತಮ್ಮ ಧ್ಯೇಯ. ರಾಜ್ಯದ ಜನತೆಗೆ ಕಲ್ಯಾಣ, ಸ್ವ-ಸಮೃದ್ಧಿ ಮತ್ತು ಗುಣಮಟ್ಟದ ಜೀವನ ಕಲ್ಪಿಸುವುದೇ ವೈಎಸ್‌ಆರ್‌ ತೆಲಂಗಾಣದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಈ ವೇಳೆ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ತೆಲಂಗಾಣದಲ್ಲಿ ಟಿಆರ್‌ಎಸ್‌ ಹೊರತುಪಡಿಸಿದರೆ ಉಳಿದ ಯಾವುದೇ ಪಕ್ಷಗಳು ಇನ್ನೂ ನೆಲೆ ಕಂಡುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಅವರು ತಮ್ಮ ಸೋದರ ಆಡಳಿತ ನಡೆಸುತ್ತಿರುವ ಆಂಧ್ರಪ್ರದೇಶವನ್ನು ಬಿಟ್ಟು ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!