ಜಗದೀಪ್‌ ಧನ್‌ಕರ್‌ ರಾಜೀನಾಮೆಗೆ ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

Published : Jul 23, 2025, 09:54 AM ISTUpdated : Jul 23, 2025, 10:21 AM IST
jagdeep dhankhar pm modi

ಸಾರಾಂಶ

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ ಅವರ ದಿಢೀರ್ ರಾಜೀನಾಮೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರದ ಬಗ್ಗೆ ಅಸಮಾಧಾನ, ಜಾಟ್ ಸಮುದಾಯದ ಬಗ್ಗೆ ಅನ್ಯಾಯದ ಆರೋಪ, ನ್ಯಾಯಮೂರ್ತಿ ವರ್ಮಾ ವಿರುದ್ಧದ ಅರ್ಜಿ ಸ್ವೀಕಾರ ಸೇರಿದಂತೆ ಹಲವು ಕಾರಣಗಳಿವೆ ಎನ್ನಲಾಗಿದೆ.

ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ (Jagdeep Dhankhar) ಅವರ ದಿಢೀರ್‌ ರಾಜೀನಾಮೆ (resignation), ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹಗಳಿಗೆ ಕಾರಣವಾಗಿದೆ. ಅವರು ಇಂಥದ್ದೊಂದು ಕಠಿಣ ನಿರ್ಧಾರವನ್ನ ಏಕಾಏಕಿ ತೆಗೆದುಕೊಂಡಿದ್ದು ಹೇಗೆ? ಇದರ ಹಿಂದೆ ಯಾವ ಒತ್ತಡವಿತ್ತು ಅನ್ನೋದರ ಬಗ್ಗೆ ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಆಗುತ್ತಿದೆ. ಹಾಗಿದ್ದಲ್ಲಿ, ಮೋದಿ (Narendra Modi) ಸರ್ಕಾರ ಏಕೆ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ರಿಗೆ ರಾಜೀನಾಮೆ ಕೊಡುವಂತೆ ಒತ್ತಡ ಹಾಕಿತು? ಇಲ್ಲಿದೆ inside story

ಕೆಲ ದಿನಗಳಿಂದ ಯಾರೇ ಭೇಟಿ ಯಾಗಲು ಹೋದರು ಕೇಂದ್ರ ಸರ್ಕಾರದ ಬಗ್ಗೆ ಧನ್‌ಕರ್‌ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದರಂತೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ರನ್ನ ಕರೆಸಿ ಕೊಂಡು ಸರ್ಕಾರ ತನ್ನ ಜಾಟ್ ಸಮುದಾಯದ ಬಗ್ಗೆ ಅನ್ಯಾಯ ಮಾಡಿದೆ ಎಂದೆಲ್ಲ ಧನ್‌ಕರ್‌ ಮಾತನಾಡಿದ್ದರು ಎಂದು ಹೇಳಲಾಗ್ತಿದೆ.

ಅಷ್ಟೇ ಅಲ್ಲ ಪ್ರಧಾನಿ ಮೋದಿ ಅವರ ಭದ್ರತೆಗೆ ಬಳಸುವ ವಾಹನಗಳನ್ನೇ ತನಗೆ ನೀಡಬೇಕು ಎಂದು ಬೇಡಿಕೆ ಗ್ರಹ ಇಲಾಖೆಯ ನಕಾರ ವ್ಯಕ್ತಪಡಿಸಿತ್ತು. ಆದರೆ ಯಾವಾಗ ಲೋಕಸಭೆಯಲ್ಲಿ ನ್ಯಾಯಮೂರ್ತಿ ವರ್ಮಾ ವಿರುದ್ಧದ ಅರ್ಜಿ ಸಲ್ಲಿಕೆ ಆಯಿತೋ ಆಗ ಸರ್ಕಾರವನ್ನು ವಿಶ್ವಾಸಕ್ಕೆ ಕೂಡ ತೆಗೆದು ಕೊಳ್ಳದೆ ವಿಪಕ್ಷ ಗಳ ಅರ್ಜಿ ಸ್ವೀಕಾರ ಮಾಡಿದ್ದು ಸರ್ಕಾರವನ್ನು ಕೆರಳಿಸಿದೆ.

ಜಸ್ಟಿಸ್ ವರ್ಮಾ ವಿರುದ್ಧ ಮಾಡಿದಂತೆ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದ ಜಸ್ಟಿಸ್ ಯಾದವ್ ವಿರುದ್ಧ ಮಾಡಿದರೆ ಅನ್ನುವ ಆತಂಕ ಮೋದಿ ಸರ್ಕಾರಕ್ಕೆ ಇತ್ತು. ಹೀಗಾಗಿ ಕೇಂದ್ರ ಸಚಿವ ಪಿಯುಶ್ ಗೊಯಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಪರಾಷ್ಟ್ರಪತಿ ಗಳ ವಿರುದ್ಧ ಸಹಿ ಸಂಗ್ರಹ ಮಾಡುವ ಸಂಬಂಧ ಸಂಸದರ ಸಭೆ ನಡೆಯಿತು. ಹೀಗಾಗಿ ಸೋಮವಾರ ಜಗದೀಪ್ ಧನ್ ಕರ್ ರಾಜೀನಾಮೆ ಅನಿವಾರ್ಯ ಆಗಿತ್ತು ಎನ್ನುವ ವರದಿಗಳಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

PN
About the Author

Prashant Natu

ಮೂಲತಃ ಉತ್ತರ ಕರ್ನಾಟಕದ ಹುಬ್ಬಳ್ಳಿ. ಆಟೋ ಮೊಬೈಲ್ ಎಂಜಿನಿಯರಿಂಗ್ ಶಿಕ್ಷಣದ ನಂತರ ಬದಲಾಯಿತು ದಿಕ್ಕು. ರಾಜಕೀಯ ವರದಿಗಾರಿಕೆ ಮಾಡಲೆಂದೇ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಅಧ್ಯಯನ. ದಿಲ್ಲಿಯಲ್ಲಿ ಸುವರ್ಣ ನ್ಯೂಸ್ ವರದಿಗಾರನಾಗಿ ಆಯ್ಕೆ. 18 ವರ್ಷಗಳಿಂದಲೂ ಒಂದೇ ಸಂಸ್ಥೆ ಯಲ್ಲಿ ಕೆಲಸ ಮಾಡುತ್ತಿರುವುದು ವಿಶೇಷ. ರಾಜಕೀಯ ವರದಿಗಾರಿಕೆ ಮತ್ತು ನಿಖರ ವಿಶ್ಲೇಷಣೆಗಳಿಗೆ ಕನ್ನಡ ಪತ್ರಿಕೋದ್ಯಮದಲ್ಲಿ ಮಾತ್ರವಲ್ಲ, ರಾಷ್ಟ್ರೀಯ ಮಾಧ್ಯಮದಲ್ಲೂ ಹೆಸರುವಾಸಿ. 2015ರಿಂದ ಕನ್ನಡ ಪ್ರಭ ಪತ್ರಿಕೆಯಲ್ಲಿ 'ಇಂಡಿಯಾ ಗೇಟ್' ಎಂಬ ದಿಲ್ಲಿ ರಾಜಕೀಯದ ಒಳ ಸುಳಿವು ಅಂಕಣ ಪ್ರಕಟವಾಗುತ್ತಿದೆ. ಸುವರ್ಣ ನ್ಯೂಸ್‌ನ 'ಮಾರ್ನಿಂಗ್ ನ್ಯೂಸ್ ಅವರ್' ಸಂಜೆ 'ಪಾರ್ಟಿ ರೌಂಡ್ಸ್' 'ಲೆಫ್ಟ್ ರೈಟ್ ಸೆಂಟರ್' ಕಾರ್ಯಕ್ರಮಗಳು ಹೆಚ್ಚು ಪ್ರಸಿದ್ಧ.Read More...
Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್