
ಡೆಹ್ರಾಡೂನ್(ಜೂ.14): ಉತ್ತರಾಖಂಡ್ ರಾಜ್ಯದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಮಾಸ್ಕ್ ಧಾರಣೆ ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡರೆ 6 ತಿಂಗಳು ಜೈಲೂಟ ಹಾಗೂ 5000 ರು. ದಂಡ ಗ್ಯಾರೆಂಟಿ.
ಹೌದು, ಬಹಳ ವೇಗವಾಗಿ ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುತ್ತಿರುವ ಕೊರೋನಾ ನಿಗ್ರಹಕ್ಕಾಗಿ ಉತ್ತರಾಖಂಡ್ ಸರ್ಕಾರದ ಈ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ಅವರು ಅನುಮೋದನೆ ನೀಡಿದ್ದಾರೆ. ದೇಶದ ಎಲ್ಲ ರಾಜ್ಯಗಳಲ್ಲೂ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ಆದರೆ, ಮಾಸ್ಕ್ ಧರಿಸದೆ ಇರುವವರಿಗೆ ಜೈಲು ಶಿಕ್ಷೆ ಮತ್ತು 5000 ರು.ನಷ್ಟುದಂಡ ವಿಧಿಸಲು ಮುಂದಾಗಿರುವುದು ಉತ್ತರಾಖಂಡ್ ಸರ್ಕಾರವೇ ಮೊದಲು.
ವರಮಾನಕ್ಕಾಗಿ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಉತ್ತರಾಖಂಡ್ನಲ್ಲಿ ಈಗಾಗಲೇ 1700ಕ್ಕೂ ಹೆಚ್ಚು ಸೋಂಕು ಪೀಡಿತರು ಕಂಡುಬಂದಿದ್ದು, ಇದರ ತ್ವರಿತ ನಿಗ್ರಹಕ್ಕಾಗಿ 1897ರ ಸಾಂಕ್ರಮಿಕ ರೋಗ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿದೆ. ಈ ಮೂಲಕ ಕೊರೋನಾ ತಡೆಗಾಗಿ ಈ ಕಾಯ್ದೆಯನ್ನು ತಿದ್ದುಪಡಿ ಮಾಡಿದ ಮೂರನೇ ರಾಜ್ಯವಾಗಿದೆ ಉತ್ತರಾಖಂಡ್. ಇದಕ್ಕೂ ಮುನ್ನ ಕೇರಳ ಹಾಗೂ ಒಡಿಶಾ ಸರ್ಕಾರಗಳು ಕಾಯ್ದೆಯನ್ನು ತಿದ್ದುಪಡಿ ಮಾಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ