Govt Job: ಅಪ್ಪನಿಂದ ಬಂದಿದ್ದ ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಡುಡುಂ ಮಾಡಿಸಿದ ಮಗಳು!

Published : Jul 08, 2026, 09:01 PM IST
Jaipur Daughter Kills her Mother

ಸಾರಾಂಶ

ಸರ್ಕಾರಿ ಕೆಲಸ ಮತ್ತು ಆಸ್ತಿಗಾಗಿ 23 ವರ್ಷದ ಮಗಳು ತನ್ನ ತಾಯಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾಳೆ. ಅಪಘಾತವೆಂದು ಬಿಂಬಿಸಲು ಯತ್ನಿಸಿದ ಈ ಕೃತ್ಯವನ್ನು ಪೊಲೀಸರು ತನಿಖೆ ನಡೆಸಿ, ಮಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಸ್ತಿ ಮತ್ತು ಕೆಲಸದ ಆಸೆ ಮನುಷ್ಯನನ್ನು ಎಷ್ಟರಮಟ್ಟಿಗೆ ಕುರುಡಾಗಿಸಬಹುದು ಎಂಬುದಕ್ಕೆ ರಾಜಸ್ಥಾನದ ಜೈಪುರದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಸರ್ಕಾರಿ ಕೆಲಸ ಮತ್ತು ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ 23 ವರ್ಷದ ಮಗಳೇ ತನ್ನ ತಾಯಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.

ಅಪಘಾತವೆಂದು ನಂಬಿಸಲು ಯತ್ನ:

ಜೈಪುರದ ಪ್ರತಾಪ್ ನಗರದ ನಿವಾಸಿ ನೀರಜ್ ಶರ್ಮಾ (45) ಜುಲೈ 3 ರಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಮೇಲ್ನೋಟಕ್ಕೆ ಇದು ಸಾಮಾನ್ಯ ಅಪಘಾತದಂತೆ ಕಂಡರೂ, ಮೃತ ಮಹಿಳೆಯ ಸಹೋದರ ರಾಕೇಶ್‌ಗೆ ತಂಗಿಯ ಸಾವಿನ ಬಗ್ಗೆ ಬಲವಾದ ಅನುಮಾನವಿತ್ತು. ಇದು ಉದ್ದೇಶಪೂರ್ವಕವಾಗಿ ನಡೆದ ಕೊಲೆ ಎಂದು ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಾಗ ಅಸಲಿ ಸತ್ಯ ಹೊರಬಂದಿದೆ.

ಕೆಲಸದ ಮೇಲೆ ಕಣ್ಣಿಟ್ಟಿದ್ದ ಮಗಳು:

ಮೃತ ನೀರಜ್ ಶರ್ಮಾ ಅವರು ಜೈಪುರ ನ್ಯಾಯಾಲಯದಲ್ಲಿ ಎಲ್‌ಡಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪತಿ ವಿಜಯ್ ಕುಮಾರ್ ಶರ್ಮಾ ಅವರ ಮರಣದ ನಂತರ, ಅನುಕಂಪದ ಆಧಾರದ (Compassionate Appointment) ಮೇಲೆ ನೀರಜ್‌ಗೆ ಈ ಕೆಲಸ ಸಿಕ್ಕಿತ್ತು. ಆದರೆ, ಪದವೀಧರೆಯಾಗಿದ್ದ ಮಗಳು ಆಯುಷಿಗೆ ಆ ಸರ್ಕಾರಿ ಕೆಲಸದ ಮೇಲೆ ಕಣ್ಣಿತ್ತು. ತಾಯಿ ಬದುಕಿರುವವರೆಗೆ ಆ ಕೆಲಸ ತನಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಆಕೆ ತಾಯಿಯನ್ನೇ ಮುಗಿಸಲು ಸಂಚು ರೂಪಿಸಿದ್ದಳು.

ಸಂಬಂಧಿಕರ ಜೊತೆಗೂಡಿ ಸ್ಕೆಚ್:

ಈ ಕೃತ್ಯಕ್ಕೆ ಆಯುಷಿಗೆ ಆಕೆಯ ಸ್ವಂತ ಮಾವ (ತಾಯಿಯ ಇನ್ನೊಬ್ಬ ಸಹೋದರ), ಕಸಿನ್ ಮತ್ತು ಇತರ ನಾಲ್ವರು ಸಂಬಂಧಿಕರು ಸಾಥ್ ನೀಡಿದ್ದರು. ತಾಯಿಯನ್ನು ಅಪಘಾತದ ರೂಪದಲ್ಲಿ ಕೊಂದರೆ ಯಾರೂ ಅನುಮಾನಿಸುವುದಿಲ್ಲ ಮತ್ತು ತಾಯಿಯ ಮರಣದ ನಂತರ ಅನುಕಂಪದ ಆಧಾರದಲ್ಲಿ ತನಗೇ ಆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ಆಯುಷಿ ನಂಬಿದ್ದಳು. ಈ ಕೊಲೆಗಾಗಿ ಸುಪಾರಿ ಕೂಡ ನೀಡಲಾಗಿತ್ತು.

ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಗಳು ಆಯುಷಿ ಸೇರಿದಂತೆ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಸ್ತಿ ಮತ್ತು ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಬಲಿ ಪಡೆದ ಮಗಳ ಕ್ರೌರ್ಯಕ್ಕೆ ಜೈಪುರದ ಜನತೆ ಬೆಚ್ಚಿಬಿದ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪದವಿ ಮುಗಿದ ನಾಲ್ಕೇ ವರ್ಷಕ್ಕೆ ಮೈಕ್ರೋಸಾಫ್ಟ್​ ನಿರ್ದೇಶಕ! ಅಂಥದ್ದೇನು ಮಾಡಿದ್ರು ಈ ಯುವಕ ನೋಡಿ
ಕೊನೆಗೂ ಈಡೇರಲಿಲ್ಲ ನಟ ಪವನ್​ ಕಲ್ಯಾಣ್​ ಆಸೆ: ನಗು ಉಳಿಸಿ, ಹೃದಯ ಛಿದ್ರ ಮಾಡಿ ಮರೆಯಾದ ಪುಟ್ಟ ಅಭಿಮಾನಿ