
ಜೈಪುರ: ಹಬ್ಬ ಹರಿದಿನಗಳಲ್ಲಿ ಸಿಹಿ ತಿಂಡಿಗಳಿಗೆ ವಿಶೇಷ ಸ್ಥಾನಮಾನವಿದೆ. ಆದರೆ ಜೈಪುರದ ಉದ್ಯಮಿ ಮಹಿಳೆ ಅಂಜಲಿ ಜೈನ್ ಈ ಸಿಹಿತಿಂಡಿಗಳನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅದರ ಭಾಗವಾಗಿ ಸ್ವರ್ಣ್ ಪ್ರಸಾದ ಎಂಬ ಸಿಹಿ ತಿಂಡಿಯನ್ನು ತಯಾರಿಸಿದ್ದಾರೆ. ಈ ತಿಂಡಿ ಕೇಜಿಗೆ 1.11 ಲಕ್ಷ ರು. ಅಷ್ಟೇ!! ಇದರ ಒಂದು ತುಂಡು 3,000 ರು. ಇದ್ದು, ಇದರಲ್ಲಿ ಚಿನ್ನದ ಭಸ್ಮ, ಉತ್ಕೃಷ್ಟ ಒಣ ಹಣ್ಣುಗಳು ಮತ್ತು ಶುದ್ಧ ಕೇಸರಿಯನ್ನು ಬಳಸಿ ತಯಾರಿಸಲಾಗಿದ್ದು, ಐಷಾರಾಮಿ ಜತೆಗೆ ಆರೋಗ್ಯಕರ ಅಂಶವನ್ನು ಇದರಲ್ಲಿ ಬೆರೆಸಿದ್ದಾರೆ. ಇದಿಷ್ಟೇ ಅಲ್ಲದೇ ಜೈನ್ ಇನ್ನಿತರ ಸಿಹಿ ತಿಂಡಿಗಳನ್ನು ಮಾಡಿದ್ದು, ಅದರ ಬೆಲೆಯೂ 50 ಸಾವಿರದ ಮೇಲೆಯೇ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ