ಅಯೋಧ್ಯೆ ಮೇಲೆ ಭೀಕರ ದಾಳಿಗೆ ಜೈಷ್ ಉಗ್ರರ ಸಂಚು!

Published : Dec 26, 2019, 08:53 AM ISTUpdated : Dec 26, 2019, 08:57 AM IST
ಅಯೋಧ್ಯೆ ಮೇಲೆ ಭೀಕರ ದಾಳಿಗೆ ಜೈಷ್ ಉಗ್ರರ ಸಂಚು!

ಸಾರಾಂಶ

ಅಯೋಧ್ಯೆಯಲ್ಲಿ ದಾಳಿಗೆ ಜೈಷ್‌ ಸಂಚು| ಅಜರ್‌ನ ಸಂದೇಶ ಗುಪ್ತಚರ ದಳಕ್ಕೆ ಲಭ್ಯ| ಇದರ ಬೆನ್ನಲ್ಲೇ ಅಯೋಧ್ಯೆಯಲ್ಲಿ ಭದ್ರತೆ ಬಿಗಿ

ನವದೆಹಲಿ[ಡಿ.26]: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್‌ ಹಿಂದೂ ಸಂಘಟನೆಗಳಿಗೆ ಅನುಮತಿ ನೀಡಿದ ಬೆನ್ನಲ್ಲೇ, ಜೈಷ್‌ ಎ ಮೊಹಮ್ಮದ್‌ ಉಗ್ರವಾದಿ ಸಂಘಟನೆ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಜೈಷ್‌ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ಟೆಲಿಗ್ರಾಂ ಆ್ಯಪ್‌ನಲ್ಲಿ ಕಳಿಸಿದ ಸಂದೇಶವೊಂದನ್ನು ಗುಪ್ತಚರ ದಳ ಭೇದಿಸಿದ್ದು, ಅದರಲ್ಲಿ ಅಯೋಧ್ಯೆ ಮೇಲಿನ ದಾಳಿ ಸಂಚಿನ ಮಾಹಿತಿ ಇದೆ. ಜೈಷ್‌ ಮತ್ತು ಇತರ ಉಗ್ರರು ಟೆಲಿಗ್ರಾಂ ಆ್ಯಪ್‌ಅನ್ನೇ ಹೆಚ್ಚು ಬಳಸುತ್ತಾರೆ ಎಂಬುದು ಇಲ್ಲಿ ಗಮನಾರ್ಹ.

ಈ ಸಂದೇಶದ ಮಾಹಿತಿಯನ್ನು ಭದ್ರತಾ ಪಡೆಗಳ ಜತೆ ಗುಪ್ತಚರ ದಳ ಹಂಚಿಕೊಂಡಿದೆ. ಇದರ ಬೆನ್ನಲ್ಲೇ ಅಯೋಧ್ಯೆಯಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. ಇದಲ್ಲದೆ, ದೇಶದಲ್ಲಿನ ಭದ್ರತಾ ಸಂಸ್ಥೆಗಳು ಜೈಷ್‌ ಜಾಲದ ಮೇಲೆ ಹದ್ದಿನ ಕಣ್ಣು ಇರಿಸಿವೆ.

ಈ ಹಿಂದೆ ಜೈಷ್‌ ಅನೇಕ ಉಗ್ರ ಕೃತ್ಯಗಳನ್ನು ಭಾರತದಲ್ಲಿ ಕೈಗೊಂಡಿದೆ. 2001ರ ಸಂಸತ್‌ ಮೇಲಿನ ದಾಳಿ, 2019ರ ಪುಲ್ವಾಮಾ ಸಿಆರ್‌ಪಿಎಫ್‌ ಯೋಧರ ಮೇಲಿನ ದಾಳಿ ಪ್ರಮುಖವಾದವು. ಇದರ ಮುಖ್ಯಸ್ಥ ಅಜರ್‌ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎಂದು ಈ ವರ್ಷ ಮೇ 1ರಂದು ಘೋಷಿತನಾಗಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!