ಚೀನಾ ಅಧ್ಯಕ್ಷರ ಜತೆ ಜೈಶಂಕರ್‌ ಭೇಟಿ : ಗಡಿ ಬಗ್ಗೆ ಚರ್ಚೆ

Kannadaprabha News   | Kannada Prabha
Published : Jul 16, 2025, 03:33 AM IST
Jaishankar

ಸಾರಾಂಶ

ಶಾಂಘೈ ಕಾರ್ಪೊರೇಷನ್ ಆರ್ಗನೈಸೇಷನ್‌ ಸಭೆ ಹಿನ್ನೆಲೆಯಲ್ಲಿ ಬೀಜಿಂಗ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗಿದ್ದಾರೆ.

ಬೀಜಿಂಗ್‌/ನವದೆಹಲಿ: ಶಾಂಘೈ ಕಾರ್ಪೊರೇಷನ್ ಆರ್ಗನೈಸೇಷನ್‌ ಸಭೆ ಹಿನ್ನೆಲೆಯಲ್ಲಿ ಬೀಜಿಂಗ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಗಡಿ ವಿವಾದ ಸೇರಿ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಾಗುತ್ತಿರುವ ಸುಧಾರಣೆಗಳ ಕುರಿತು ವಿವರಣೆ ನೀಡಿದ್ದಾರೆ.

2020ರ ಅರುಣಾಚಲ ಪ್ರದೇಶದ ಗಾಲ್ವಾನ್‌ ವ್ಯಾಲಿ ಸಂಘರ್ಷದ ಬಳಿಕ ಭಾರತೀಯ ವಿದೇಶಾಂಗ ಸಚಿವರ ಮೊದಲ ಚೀನಾ ಭೇಟಿ ಇದಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಜೈಶಂಕರ್‌, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಶುಭ ಕಾಮನೆಯ ಸಂದೇಶವನ್ನು ಜಿನ್‌ಪಿಂಗ್‌ ಅವರಿಗೆ ತಲುಪಿಸಿದ್ದೇನೆ. ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಕುರಿತ ಬೆಳವಣಿಗೆಗಳ ಕುರಿತು ಅವರಿಗೆ ವಿವರಿಸಿದ್ದೇನೆ. ಈ ವಿಚಾರದಲ್ಲಿ ನಾಯಕರ ಮಾರ್ಗದರ್ಶನವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಸೋಮವಾರವಷ್ಟೇ ಜೈಶಂಕರ್‌ ಅವರು, ಕಳೆದ ಒಂಬತ್ತು ತಿಂಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸಾಕಷ್ಟು ಪ್ರಗತಿ ಆಗುತ್ತಿದೆ. ಇನ್ನು ಮುಂದೆ ಗಡಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳು, ಮುಖ್ಯವಾಗಿ ಸಂಘರ್ಷ ಕಡಿತಗೊಳಿಸುವ ಕುರಿತು ಹೆಚ್ಚಿನ ಆದ್ಯತೆ ನೀಡಬೇಕಿದೆ. ಜತೆಗೆ, ಚೀನಾವು ವ್ಯಾಪಾರದ ವಿಚಾರದಲ್ಲಿ ಅಡೆ-ತಡೆ ಸೃಷ್ಟಿಸಬಾರದು, ರೇರ್‌ ಅರ್ಥ್‌ ಖನಿಜಗಳ ರಫ್ತಿನ ಮೇಲೆ ಯಾವುದೇ ನಿರ್ಬಂಧ ವಿಧಿಸಬಾರದು ಎಂದು ಹೇಳಿಕೊಂಡಿದ್ದರು.

ಜೈಶಂಕರ್‌-ಜಿನ್‌ಪಿಂಗ್‌ ಭೇಟಿಗೆ ಕಿಡಿ:

ಚೀನಾ ಅಧ್ಯಕ್ಷ-ವಿದೇಶಾಂಗ ಸಚಿವ ಜೈಶಂಕರ್‌ ಭೇಟಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಭಾರತದ ವಿದೇಶಾಂಗ ನೀತಿ ಹಾಳುಗೆಡವಲು ಜೈಶಂಕರ್‌ ಅವರು ತೀವ್ರತರದ ಸರ್ಕಸ್‌ ನಡೆಸುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಇದೇ ವೇಳೆ ಜೈರಾಂ ರಮೇಶ್‌ ಸೇರಿ ಇತರೆ ಕಾಂಗ್ರೆಸ್‌ ನಾಯಕರು, ಆಪರೇಷನ್‌ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ ಪ್ರಸ್ತಾಪಿಸಿ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ