
ಚೆನ್ನೈ: ಗೂಳಿಗಳನ್ನು ಓಡಿಸುವ ಸಾಂಪ್ರಾದಾಯಿಕ ಆಟವಾದ ಜಲ್ಲಿಕಟ್ಟು ಕ್ರೀಡೆಗೆ ಕಳೆದ ವರ್ಷ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಆಟಕ್ಕೆ ಕಾರ್ಪೊರೆಟ್ ಟಚ್ ನೀಡಿ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ಆಡಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ.
ಇದಕ್ಕೆ ನೆರವಾಗಬಹುದಾದಂಥ ರಾಜ್ಯದ ಮೊದಲ ಅತ್ಯಾಧುನಿಕ ಕ್ರೀಡಾಂಗಣವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ಉದ್ಘಾಟಿಸಿದ್ದಾರೆ. ಮಧುರೈನ ಅಲಂಗಾನಲ್ಲೂರ್ನಲ್ಲಿ 66.8 ಎಕರೆ ವಿಸ್ತೀರ್ಣದಲ್ಲಿ ನೂತನ ಜಲ್ಲಿಕಟ್ಟು ಕ್ರೀಡಾಂಗಣ ನಿರ್ಮಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಕೂರುವ ವ್ಯವಸ್ಥೆ ಇದ್ದು, ಜಲ್ಲಿಕಟ್ಟು ಕ್ರೀಡೆಯ ಮಹತ್ವವನ್ನು ತಿಳಿಸುವ ವಸ್ತುಸಂಗ್ರಹಾಲಯವನ್ನು ಸಹ ಹೊಂದಿದೆ. ಇದಲ್ಲದೆ ಗೂಳಿಗಳು ಗಾಯಗೊಂಡರೆ ಅವುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಸೇರಿದಂತೆ ಹಲವಾರು ಆಧುನಿಕ ಸೌಲಭ್ಯಗಳನ್ನು ಕ್ರೀಡಾಂಗಣ ಹೊಂದಿದೆ.
ತಮಿಳುನಾಡಲ್ಲಿ ಸಂಕ್ರಾಂತಿ ಸಂಭ್ರಮ, ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿ ದಾಳಿಗೆ 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಐಪಿಎಲ್ ಸ್ಪರ್ಶ: ಜಲ್ಲಿಕಟ್ಟು ಈಗಾಗಲೇ ತಮಿಳುನಾಡಿನಲ್ಲಿ ಬಹು ಜನಪ್ರಿಯ ಕ್ರೀಡೆಯಾದರೂ ಅದಕ್ಕೆ ಆಧುನಿಕತೆ ಸ್ಪರ್ಶ ನೀಡಲು ತಮಿಳುನಾಡು ಸರ್ಕಾರ ಮತ್ತು ಕೆಲ ಜಲ್ಲಿಕಟ್ಟು ಆಯೋಜಿಸುವ ಸಂಘಟನೆಗಳು ಮುಂದಾಗಿವೆ. ಈ ಮೂಲಕ ಉದ್ಯಮಗಳನ್ನೂ ಈ ಕ್ರೀಡೆಯತ್ತ ಸೆಳೆಯುವ, ಕ್ರೀಡೆಯನ್ನು ಪ್ರವಾಸೋದ್ಯಮದ ಭಾಗ ಮಾಡುವ, ಗೆದ್ದವರಿಗೆ ಚಿನ್ನ, ಬೈಕ್, ಕಾರಿನ ಜೊತೆಗೆ ಇನ್ನೂ ಹೆಚ್ಚಿನ ಮೊತ್ತ ಬಹುಮಾನ ನೀಡುವ ಉದ್ದೇಶವನ್ನು ಯೋಜನೆ ಹೊಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ