Video: ಜಾಮಿಯಾ ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳಿಗೆ ಥಳಿಸಿದ್ದ ಪೊಲೀಸರು!

Published : Feb 16, 2020, 11:21 AM IST
Video: ಜಾಮಿಯಾ ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳಿಗೆ ಥಳಿಸಿದ್ದ ಪೊಲೀಸರು!

ಸಾರಾಂಶ

ಜಾಮಿಯಾ ಹಿಂಸಾಚಾರ ಸಂಬಂಧ ಮತ್ತೊಂದು ವಿಡಿಯೋ ರಿಲೀಸ್| ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದ ಪೊಲೀಸರು| ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಆಗ್ರಹ

ನವದೆಹಲಿ[ಫೆ.16]: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ಆವರಣದಲ್ಲಿ 2019ರ ಡಿಸೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಡಿಸೆಂಬರ್ 15ರಂದು ಕಾಲೇಜಿನ ಗ್ರಂಥಾಲಯಕ್ಕೆ ನುಗ್ಗಿದ್ದ ಪೊಲೀಸರು ಅಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. ಆದರೀಗ ಪ್ರಕರಣ ನಡೆದ 2 ತಿಂಗಳ ಬಳಿಕ ಆ ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ.

ಇವು ಜಾಮಿಯಾ ಆವರಣದಲ್ಲಿರುವ ಹಳೆ ಲೈಬ್ರರಿಯಲ್ಲಿ ನಡೆದ ಘಟನೆಯ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳಾಗಿವೆ. ಈ ದೃಶ್ಯಗಳಲ್ಲಿ ಗ್ರಂಥಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳ ಮೇಲೆ, ಪೊಲೀಸರು ಏಕಾಏಕಿ ನುಗ್ಗಿ ಲಾಠಿ ಪ್ರಹಾರ ನಡೆಸುತ್ತಿರುವುದು ಸ್ಪಷ್ಟವಾಗಿ ಗಮನಿಸಬಹುದಾಗಿದೆ. ಈ ವೇಳೆ ಅನೇಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವೆಂ.ಬುವುದು ಉಲ್ಲೇಖನೀಯ. ಇನ್ನು ಘಟನೆ ಬಳಿಕ ಗ್ರಂಥಾಲಯ ಈವರೆಗೂ ಮುಚ್ಚಲಾಗಿದೆ. ಸದ್ಯ ವೈರಲ್ ಆದ ವಿಡಿಯೋವನ್ನು ಜಾಮಿಯಾ ಕಾರ್ಟಿನೇಷನ್ ಕಮಿಟಿಯೇ ಬಹಿರಂಗಪಡಿಸಿದೆ.

JCC ಬಿಡುಗಡೆಗೊಳಿಸಿರುವ ಈ ವಿಡಿಯೋ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಲೈಬ್ರರಿಯದ್ದಾಗಿದೆ. ಇನ್ನು ಪೊಲೀಸರು ನಡೆಸಿದ್ದ ಈ ಹಿಂಸಾಚಾರದಲ್ಲಿ ಓರ್ವ ವಿದ್ಯಾರ್ಥಿ ಕಣ್ಣು ಕಳೆದುಕೊಂಡಿದ್ದ ಎಂದು ವಿಡಿಯೋ ಶೇರ್ ಮಾಡಿಕೊಂಡಿರುವ ವ್ಯಕ್ತಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2019ರ ಡಿಸೆಂಬರ್ 15 ರಂದು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ನಡೆಸಿದ್ದರು. ಆದರೆ ಅದೇ ದಿನ ರಾತ್ರಿ ವಿಶ್ವವಿದ್ಯಾನಿಲಯ ಆವರಣಕ್ಕೆ ಏಕಾಏಕಿ ನುಗ್ಗಿದ್ದ ಪೊಲೀಸರು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ಪೊಲೀಸರ ವಿರುದ್ಧ ದೂರು ದಾಖಲಿಸಿತ್ತು. ಆದರೂ ಈವರೆಗೆ ತನಿಖೆ ಮುಂದುವರೆದಿದ್ದು, ವಿದ್ಯಾರ್ಥಿಗಳು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!